ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಜ್ಞಾನಸುಧಾ ವಿದ್ಯಾರ್ಥಿಗಳಿಗೆ ರಜತ ಪದಕ

ಕಾರ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಶಿವಮೊಗ್ಗದಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಸುಹಾಸ್‌. ಎಸ್.‌ ಜೋಳದ್‌ ಮತ್ತು ಪ್ರಥಮ ವಿಜ್ಞಾನ ವಿಭಾಗದ ಸ್ತುತಿ.ಎಚ್‌.ಬಿ. ಭಾಗವಹಿಸಿ ದ್ವಿತೀಯ ಸ್ಥಾನಗಳಿಸಿ ರಜಕ ಪದಕವನ್ನು ಪಡೆದು ತೀರ್ಪುಗಾರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್‌ ಪದ್ಮಗೋಪಾಲ್‌ ಎಜ್ಯುಕೇಶನ್‌ ಟ್ರಸ್ಟ್‌ನ ಅಧ್ಯಕ್ಷ ಡಾ.ಸುಧಾಕರ್‌ ಶೆಟ್ಟಿಯವರು ಅಭಿನಂದಿಸಿದ್ದು, ಆಡಳಿತ ಮಂಡಳಿ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿ ಶುಭ ಹಾರೈಸಿದ್ದಾರೆ.