ಕೌಶಲ್ಯ ತರಬೇತಿ ಕಾರ್ಯಾಗಾರ

ಉಡುಪಿ: ಸಮಾಜ ಕಲ್ಯಾಣ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ ಉಡುಪಿ ಮತ್ತು ನಾಂದಿ ಫೌಂಡೇಶನ್ ಸಹಯೋಗದೊಂದಿಗೆ ನಗರದ ಬನ್ನಂಜೆ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಜಿಲ್ಲೆಯ ಅಂತಿಮ ವರ್ಷದ ಪದವಿ ನಿಲಯಾರ್ಥಿನಿಯರಿಗೆ ನಡೆದ 6 ದಿನದ ಕೌಶಲ್ಯ ತರಬೇತಿ ಕಾರ್ಯಗಾರವನ್ನು ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಉದ್ಘಾಟಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಅನಿತ ಮಡ್ಲೂರು, ಉಡುಪಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮೀ ದಿನ್ನಿ, ಮೇಲ್ವಿಚಾರಕರಾದ ದೀಪ, ಜಯಂತಿ, ಜೂನಿಯರ್ ವಾರ್ಡನ್ ಫರೀದಾ, ನಾಂದಿ ಫೌಂಡೇಶನ್ನಿನ ತರಬೇತಿಗಾರ್ತಿ ಕಾವ್ಯ, ಪತ್ರಾಂಕಿತ ವ್ಯವಸ್ಥಾಪಕ ರೋಷನ್ ಕುಮಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ವಿದ್ಯಾರ್ಥಿ ನಿಲಯದ ಮೇಲ್ವಿಚಾರಕಿ ಸುಚಿತ್ರ ನಿರೂಪಿಸಿದರು.