ಏ. 15 ರಂದು ರಾಜಕೀಯ ಪಕ್ಷ ಪ್ರತಿನಿಧಿಗಳಿಗಾಗಿ ಸಾಮಾಜಿಕ ಮಾಧ್ಯಮ ಜಾಹೀರಾತು ಕಾರ್ಯಾಗಾರ

ಉಡುಪಿ: ಕರ್ನಾಟಕ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ, ಮಾದರಿ ನೀತಿ ಸಂಹಿತೆಯಡಿ, ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತನ್ನು ನೀಡುವ ಕುರಿತು, ಜಿಲ್ಲಾ ಎಂಸಿಎಂಸಿ ಸಮಿತಿ ವತಿಯಿಂದ ಪೂರ್ವಾನುಮತಿ ಪಡೆಯುವ ಪ್ರಕ್ರಿಯೆ ಹಾಗೂ ಜಾಹೀರಾತುಗಳಲ್ಲಿ ಇರಬೇಕಾದ ಅಥವಾ ಇರಬಾರದ ವಿಷಯಗಳು ಸೇರಿದಂತೆ ಇತರ ವಿಷಯಗಳನ್ನು ವಿವರವಾಗಿ ತಿಳಿಸಲು ಎಲ್ಲಾ ರಾಜಕೀಯ ಪಕ್ಷಗಳಿಗೆ ಎಲ್ಲಾ ಅಭ್ಯರ್ಥಿಗಳಿಗೆ ಹಾಗೂ ಅವರ ಏಜೆಂಟರುಗಳಿಗೆ ಏಪ್ರಿಲ್ 15 ರಂದು ಬೆಳಗ್ಗೆ 11.30 ಗಂಟೆಗೆ ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದ್ದು ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷಗಳು ಅಭ್ಯರ್ಥಿಗಳು ಹಾಗೂ ಅವರ ಏಜೆಂಟರುಗಳು ಕಾರ್ಯಾಗಾರದಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆಯುವಂತೆ ಪ್ರಕಟಣೆ ತಿಳಿಸಿದೆ.