ಏ.1: ಸಮಾಜ ಕಲ್ಯಾಣ ಇಲಾಖೆ ಸಚಿವರ ಪ್ರವಾಸ

ಉಡುಪಿ: ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಏಪ್ರಿಲ್ 1 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಬೆಳಗ್ಗೆ 7.30 ರಿಂದ 8.30 ರ ವರೆಗೆ ಕೋಟ ಗೃಹ ಕಚೇರಿಯಲ್ಲಿ ಸಾರ್ವಜನಿಕ ಭೇಟಿ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮ, 10 ಗಂಟೆಗೆ ಕುಂದಾಪುರ ಪ್ರವಾಸಿ ಮಂದಿರದಲ್ಲಿ, ಉಡುಪಿ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ನಂತರ ಕಾರವಾರಕ್ಕೆ ತೆರಳಲಿರುವರು.