ಉಡುಪಿ: ಭಾರತೀಯ ಸೇನೆಯಲ್ಲಿ 22 ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿ ಹುಟ್ಟೂರಿಗೆ ಮರಳುತ್ತಿರುವ ಸೇನಾನಿ ಪೆರ್ಡೂರು ದೂಪದಕಟ್ಟೆಯ ರಮೇಶ್ ಕುಲಾಲ್ ಇವರನ್ನು ಉಡುಪಿ ರೈಲ್ವೆ ನಿಲ್ದಾಣದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುತ್ಯಾರ್ ನವೀನ್ ಶೆಟ್ಟಿಯವರು ಹೂಬೊಕ್ಕೆಯನ್ನು ಕೊಟ್ಟು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಜಿಲ್ಲಾ ಕಾರ್ಯದರ್ಶಿ ಗಿರೀಶ್ ಅಂಚನ್, ಪಕ್ಷದ ಮಾಜಿ ವಕ್ತಾರ ಗುರುಪ್ರಸಾದ್ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಸಂದ್ಯಾ ರಮೇಶ್, ಜಿಲ್ಲಾ ಅಲ್ಪ ಸಂಖ್ಯಾತ ಮೋರ್ಚಾ ಅಧ್ಯಕ್ಷರಾದ ರುಡಾಲ್ಫ್, ಜಿಲ್ಲಾ ಎಸ್ ಸಿ ಮೋರ್ಚಾ ಅಧ್ಯಕ್ಷರಾದ ಚಂದ್ರ ಪಂಚವಟಿ ಹಾಗೂ ಅವರ ಕುಟುಂಬಸ್ಥರು ಹಾಜರಿದ್ದರು.
















