ಸಾಮಾಜಿಕ ಜಾಲ ತಾಣಗಳಲ್ಲಿ ಮಕ್ಕಳ ಕಳ್ಳರ ಬಗ್ಗೆ ಸುಳ್ಳು ಸುದ್ದಿ ಹರಡಿದಲ್ಲಿ ಕ್ರಮ: ಅಕ್ಷಯ್ ಹಾಕೆ

ಉಡುಪಿ: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಕಳ್ಳರು ಬಂದಿರುತ್ತಾರೆ ಎಂಬ ಬಗ್ಗೆ ಸುಳ್ಳು ಸುದ್ದಿ ಹರಿದಾಡುತ್ತಿದ್ದು ಈ ವಿಷಯಕ್ಕೆ ಸಂಬಂಧಿಸಿದಂತೆ ಬೇರೆ ಬೇರೆ ದೇಶದ/ರಾಜ್ಯದ ವಿಡಿಯೋಗಳನ್ನು ಪ್ರಕಟಿಸಲಾಗುತ್ತಿದೆ. ಇದರಿಂದ ಆತಂಕಗೊಂಡ ಸಾರ್ವಜನಿಕರು ಅಪರಿಚಿತ ಅಮಾಯಕ ವ್ಯಕ್ತಿಗಳನ್ನು ತಡೆದು ಹಲ್ಲೆ ಮಾಡುವ ಘಟನೆಗಳು ಬೆಳಕಿಗೆ ಬಂದಿರುತ್ತದೆ.

ಸಾರ್ವಜನಿಕರು ತಮ್ಮ ನಗರ/ ಗ್ರಾಮ /ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಯಾವುದೇ ಸಂಶಯಾಸ್ಪದ ವ್ಯಕ್ತಿಗಳು ಕಂಡು ಬಂದ ಕೂಡಲೇ 112 ಸಹಾಯವಾಣಿಗೆ ಕರೆ ಮಾಡಿದಲ್ಲಿ ಪೊಲೀಸರು ಕೊಡಲೇ ಘಟನಾ ಸ್ಥಳಕ್ಕೆ ಬಂದು ಕೂಲಂಕಷವಾಗಿ ವಿಚಾರಣೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುತ್ತಾರೆ.

ಮಕ್ಕಳ ಕಳ್ಳರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಎಂ ಹಾಕೆ ತಿಳಿಸಿದ್ದಾರೆ.