ಬೇಟೆಗೆ ಹೊರಟ ಶ್ರೀನಿವಾಸ….. ಶ್ರೀಕೃಷ್ಣ ಮಠದಲ್ಲಿ ಕೃಷ್ಣನಿಗೆ ವಿಶೇಷಾಲಂಕಾರ….

ಉಡುಪಿ: ಶ್ರಾವಣ ಶನಿವಾರದ ಪ್ರಯುಕ್ತ ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣದೇವರಿಗೆ ಕಾಣಿಯೂರು ಮಠಾಧೀಶರು “ಬೇಟೆಗೆ ಹೊರಟ ಶ್ರೀನಿವಾಸ” ಅಲಂಕಾರ ಮಾಡಿದರು. ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.