ಮಂಗಳೂರಿನಿಂದ ಅಯೋಧ್ಯೆಗೆ ತೆರಳಲಿದೆ ಕೊಯಮತ್ತೂರು ಅಯೋಧ್ಯಾ ಧಾಮ್ ಆಸ್ತಾ ರೈಲು

ಮಂಗಳೂರು: ಮಂಗಳೂರು ನಗರದಿಂದ ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಲು ವಿಶೇಷ ರೈಲು ಸೇವೆಯನ್ನು ನೀಡಲಾಗುತ್ತಿದೆ.

ರೈಲು ಸಂಖ್ಯೆ 06517 ಕೊಯಮತ್ತೂರು-ದರ್ಶನ್ ನಗರ-ಕೊಯಮತ್ತೂರು ಆಸ್ತಾ, ಫೆಬ್ರವರಿ 8 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಹೊರಟು ಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ಮೂಲಕ ಅಯೋಧ್ಯೆ ಜಂಕ್ಷನ್‌ಗೆ ಪ್ರಯಾಣಿಸಲಿದೆ.

ಫೆಬ್ರವರಿ 8 ರಂದು ಸಂಜೆ 5:50 ಕ್ಕೆ ಮಂಗಳೂರು ಜಂಕ್ಷನ್‌ಗೆ ಆಗಮಿಸಿ 6 ಗಂಟೆಗೆ ಹೊರಡಲಿದೆ. ರೈಲು ಫೆಬ್ರವರಿ 11 ರಂದು ಮುಂಜಾನೆ ಅಯೋಧ್ಯೆಯ ದರ್ಶನ್ ನಗರ ರೈಲು ನಿಲ್ದಾಣಕ್ಕೆ ಆಗಮಿಸಲಿದೆ.

ಫೆಬ್ರವರಿ 12 ರಂದು ಬೆಳಿಗ್ಗೆ 8 ಗಂಟೆಗೆ ಅಯೋಧ್ಯೆಯಿಂದ ಮರಳಿ ಫೆಬ್ರವರಿ 14 ರ ಸಂಜೆ ಮಂಗಳೂರು ಜಂಕ್ಷನ್‌ಗೆ ತಲುಪಲಿದೆ ಎಂದು ರೈಲ್ವೆ ಇಲಾಖೆ ಮೂಲಗಳು ತಿಳಿಸಿವೆ.