ಶ್ರೀ ಸತ್ಯದೆಕ್ಕಿ ಧರ್ಮರಸು ಕೊಡಮಣಿತ್ತಾಯ ಕುಕ್ಕಿನಂತಾಯ ಬ್ರಹ್ಮ ಬೈದರ್ಕಳ ಹಾಗೂ ಮಾಯಂದಾಲೆ ದೇವಿ ಜೋಡುಗರಡಿಯಲ್ಲಿ ಮೇ 3 ರಂದು ಪುನರ್ ಪ್ರತಿಷ್ಠೆ, ನೂತನ ಧ್ವಜಸ್ಥಂಭ ಪ್ರತಿಷ್ಠೆ

ಕಾರ್ಕಳ : ನೂತನ ಶಿಲಾಮಯ ಗರ್ಭಗುಡಿಗಳಲ್ಲಿ ಶ್ರೀ ಕ್ಷೇತ್ರದ ಧರ್ಮದೈವಗಳ ಪುನರ್ ಪ್ರತಿಷ್ಠೆ, ನೂತನ ಧ್ವಜಸ್ತಂಭ ಪ್ರತಿಷ್ಠೆ, ಬ್ರಹ್ಮ ಕಲಶಾಭಿಷೇಕ ಧಾರ್ಮಿಕ ಸಭೆ ಹಾಗೂ ವಾರ್ಷಿಕ ನೇಮೋತ್ಸವ ಕಾರ್ಯಕ್ರಮ ಎ. 29 ರಿಂದ ಎ.8ರವರಗೆ ನೂತನವಾಗಿ ನಿರ್ಮಿಸಿರುವ ಶಿಲಾಮಯ ಗರ್ಭಗುಡಿಗಳಲ್ಲಿ ಎಡಪದವು ಬ್ರಹ್ಮಶ್ರೀ ಮುರುಲೀಧರ ತಂತ್ರಿಗಳ ಮಾರ್ಗದರ್ಶನದಲ್ಲಿ ಗ್ರಾಮದ ಪ್ರಧಾನ ಅಸ್ರಣ್ಣರಾದ ಸಾಣೂರು ದೇಂದಬೆಟ್ಟು ವೇದಮೂರ್ತಿ ಶ್ರೀ ಶ್ರೀರಾಮ ಭಟ್ರ ನೇತೃತ್ವದಲ್ಲಿ ಶ್ರೀ ಕ್ಷೇತ್ರದ ಧರ್ಮದೈವಗಳನ್ನು ಪುನರ್ ಪ್ರತಿಷ್ಠೆ ಬ್ರಹ್ಮ ಕಲಶಾಭಿಷೇಕ ಜರಗಲಿರುವುದು.

ಆ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ನಡೆಯುವ, ವೈದಿಕ- ಧಾರ್ಮಿಕ- ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.