ಎಸ್ಸೆಸ್ಸೆಲ್ಸಿ ಮರು ಮೌಲ್ಯಮಾಪನ, ಆಳ್ವಾಸ್ ನ ಸುಜ್ಞಾನ್ ಆರ್. ಶೆಟ್ಟಿ ರಾಜ್ಯಕ್ಕೆ ಪ್ರಥಮ

ಮೂಡುಬಿದಿರೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮೌಲ್ಯಮಾಪಕರ ಎಡವಟ್ಟಿನಿಂದ ಕಡಿಮೆ ಅಂಕ ಪಡೆದಿದ್ದ ಕರಾವಳಿಯ ಮತ್ತೊಬ್ಬ ಬಾಲಕ ಮರುಮೌಲ್ಯ ಮಾಪನದಲ್ಲಿ ಗರಿಷ್ಠ ಅಂಕ ಪಡೆದಿದ್ದು, ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಸುಜ್ಞಾನ್ ಆರ್. ಶೆಟ್ಟಿ ಮರುಮೌಲ್ಯಮಾಪನದಲ್ಲಿ 625ರಲ್ಲಿ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಮೊದಲ ಸ್ಥಾನಿಯಾಗಿ ಮೂಡಿಬಂದಿದ್ದಾನೆ.
ಮೂಡುಬಿದಿರೆಯ ಅರತಿ ಹಾಗೂ ರಮೇಶ್ ಶೆಟ್ಟಿ ದಂಪತಿಯ ಪುತ್ರನಾಗಿರುವ ಸುಜ್ಞಾನ್ ಆರ್. ಶೆಟ್ಟಿ ಅವರನ್ನು ಆಳ್ವಾಸ್ ಸಂಸ್ಥೆಯ ಮುಖ್ಯಸ್ಥ ಮೋಹನ್ ಆಳ್ವ ಅಭಿನಂದಿಸಿದ್ದಾರೆ.