ಮುಜರಾಯಿ ಇಲಾಖೆಯಿಂದ ಸಾಮೂಹಿಕ ವಿವಾಹ

ಬೆಂಗಳೂರು: ಮುಜರಾಯಿ ಇಲಾಖೆಯಿಂದ ಸಾಮೂಹಿಕ ವಿವಾಹ ಯೋಜನೆಯನ್ನು ಬಿಜೆಪಿ ಸರ್ಕಾರ ಜಾರಿಗೆ ತರಲು ಮುಂದಾಗಿದ್ದು, ವಿವಾಹದ ದಿನಾಂಕವನ್ನು ನಿಗದಿ ಮಾಡಲಾಗಿದೆ.

ಈ ಕುರಿತು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದರು.

ಈ ವರ್ಷ 1 ಸಾವಿರ ವಿವಾಹ ನಡೆಯುವ ನಿರೀಕ್ಷೆ ಇದ್ದು, ಏಪ್ರಿಲ್ 26 ಮತ್ತು ಮೇ 24ರಂದು ರಾಜ್ಯದ 90 ರಿಂದ 100 ಎ ದರ್ಜೆ ದೇವಾಲಯಗಳಲ್ಲಿ ಸಾಮೂಹಿಕ ವಿವಾಹ ನಡೆಯಲಿದೆ ಎಂದು ಹೇಳಿದರು.

ಸರ್ಕಾರದ ವತಿಯಿಂದ ಸಾಮೂಹಿಕ ವಿವಾಹ ಮುಜರಾಯಿ ದೇವಾಲಯಗಳಲ್ಲಿ ನಡೆಯುವ ಸಾಮೂಹಿಕ ವಿವಾಹದಲ್ಲಿ ವಿವಾಹವಾಗುವ ಜೋಡಿಗೆ ವಧುವಿನ ತಾಳಿಗಾಗಿ 40 ಸಾವಿರ, ಧಾರೆ ಸೀರೆ ಖರೀದಿಗೆ 10  ಸಾವಿರ ರೂ., ವರನಿಗೆ ಪಂಚೆ, ಧೋತಿ ಖರೀದಿಗೆ 5 ಸಾವಿರ ರೂ. ಗಳನ್ನು ನೀಡಲಾಗುತ್ತದೆ.

ಸಾಮೂಹಿಕ ವಿವಾಹಕ್ಕೆ ಜೋಡಿಗಳು ಹೆಸರು ನೋಂದಾವಣಿ ಮಾಡುತ್ತಿದ್ದಂತೆ ಒಂದು ತಿಂಗಳ ಮೊದಲು ವರ ಮತ್ತು ವಧುವಿನ ಬ್ಯಾಂಕ್ ಖಾತೆಯಲ್ಲಿ ಜಿಲ್ಲಾಧಿಕಾರಿಗಳು ಸರ್ಕಾರದಿಂದ ನೀಡವ ಸಹಾಯಧವನ್ನು ಜಮೆ ಮಾಡಲಿದ್ದಾರೆ ಎಂದು ಸಚಿವರು ತಿಳಿಸಿದರು.