ಉಡುಪಿ ಸಬ್ ಜೈಲ್ ನಲ್ಲಿ ಖೈದಿ ಆತ್ಮಹತ್ಯೆ

ಉಡುಪಿ : ಇಲ್ಲಿನ ಸಬ್ ಜೈಲ್ ನಲ್ಲಿ ಖೈದಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ  ಇಂದು ಬೆಳಗ್ಗೆ ಸಂಭವಿಸಿದೆ.
ಉಡುಪಿಯ ಕಿದಿಯೂರು ಗ್ರಾಮದ ನಿವಾಸಿ, ವಿಚಾರಣಾಧೀನ ಖೈದಿ ಅಮರ್ ನಾಥ್ (32) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎನ್ನಲಾಗಿದೆ.
ಭಾನುವಾರ ಬೆಳಗ್ಗೆ ಕಾರಾಗ್ರಹವನ್ನು ಶುಚಿ ಮಾಡುವ ಸಂದರ್ಭದಲ್ಲಿ ವೀಡಿಯೊ ಕಾನ್ಫರೆನ್ಸ್ ಹಾಲ್ ನ   ಫ್ಯಾನಿಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎನ್ನಲಾಗಿದೆ.
ಈತನ ಮೇಲೆ ಅತ್ಯಾಚಾರ ಮತ್ತು ಜಾತಿ ನಿಂದನೆ ಪ್ರಕರಣದ ಆರೋಪವಿತ್ತು. ಈ ಕುರಿತು ಉಡುಪಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.