ಸುಧಾಕರ ಪೂಜಾರಿ ಅಭಿಮಾನಿ ಸಂಘ (ರಿ.) ಹಿರಿಯಡಕ ಇದರ 19ನೇ ವರ್ಷದ ವಾರ್ಷಿಕೋತ್ಸವ

ಉಡುಪಿ: ಸುಧಾಕರ ಪೂಜಾರಿ ಅಭಿಮಾನಿ ಸಂಘ (ರಿ.) ಹಿರಿಯಡಕ ಇದರ 19ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಶೌರ್ಯ ಪ್ರಶಸ್ತಿ ವಿತರಣಾ ಹಾಗೂ ಸಂಸ್ಮರಣಾ ಕಾರ್ಯಕ್ರಮವು ಮೇ.1 ರಂದು ಬಸ್ತಿ ಕಲ್ಕುಡ ದೇವಸ್ಥಾನ ವಠಾರದಲ್ಲಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ಸಮಾಜ ಸೇವಕ ಈಶ್ವರ್ ಮಲ್ಪೆ ಅವರೆಗೆ ಶೌರ್ಯ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಸುಧಾಕರ ಪೂಜಾರಿ ಅಭಿಮಾನಿ ಸಂಘದ ಅಧ್ಯಕ್ಷರು ಉದಯ ಕೆ. ಶೆಟ್ಟಿ ಅರ್ಭಿ , ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಪೂಜಾರಿ ಮುರತ್ತಗುಡ್ಡೆ, ನಿಕಟಪೂರ್ವ ಅಧ್ಯಕ್ಷರು ದಯಾನಂದ ಪೂಜಾರಿ, ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.