ಪ್ರಿಯಕರನೊಂದಿಗೆ ನದಿಗೆ ಹಾರಿ ನವವಿವಾಹಿತೆ ಆತ್ಮಹತ್ಯೆ

ಬೆಂಗಳೂರು: ಪ್ರಿಯಕರನೊಂದಿಗೆ ನದಿಗೆ ಹಾರಿ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೆ.ಆರ್.ಸಾಗರ ನಾರ್ತ್​ಬ್ಯಾಂಕ್ ಬಳಿಯ ಹಿನ್ನೀರಿನಲ್ಲಿ ನಡೆದಿದೆ.

ಮೈಸೂರಿನ ಮೇಟಗಳ್ಳಿಯ ಬಡವಾಣೆಯ ನಿವಾಸಿಗಳಾದ ನವೀನ್(20) ಮತ್ತು ನಿಸರ್ಗ (19) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.

ಮೃತ ನವೀನ್​​ ನಿಸರ್ಗಳ ಮಾವ ಆಗಿದ್ದು, ಇಬ್ಬರು ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಈ ಪ್ರೀತಿಗೆ ಯುವತಿಯ ಮನೆಯವರು ನಿರಾಕರಿಸಿದ್ದರು ಎನ್ನಲಾಗಿದೆ.

ಹೀಗಾಗಿ ಯುವತಿಗೆ ಚಾಮರಾಜನಗರ ಸಮೀಪದ ಗ್ರಾಮದ ಯುವಕನೊಂದಿಗೆ ನವೆಂಬರ್ 20 ರಂದು ಮದುವೆ ಮಾಡಿದ್ದರು. ಆದರೆ ಮದುವೆಯಾದ ಬಳಿಕ ಡಿಸೆಂಬರ್ 1ರ ಮಧ್ಯಾಹ್ನದಿಂದ ಯುವತಿ ನಾಪತ್ತೆಯಾಗಿದ್ದಳು.

ಇಂದು ತನ್ನ ಪ್ರಿಯಕರ (ಮಾವ) ನೊಂದಿಗೆ ನದಿ ಬಳಿ ಬಂದಿರೋ ಆಕೆ ಪರಸ್ಪರ ವೇಲ್ ಕಟ್ಟಿಕೊಂಡು ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.