ಮೀನುಗಾರರ ಶೋಧಕ್ಕಾಗಿ ಇಸ್ರೋಗೆ ಮೊರೆ: ಎಸ್ಪಿ ನಿಂಬರಗಿ

ಉಡುಪಿ: ಮಲ್ಪೆ ಬಂದರಿನಿಂದ ಆಳ ಸಮುದ್ರದ ಮೀನುಗಾರಿಕೆ ತೆರಳಿ ನಾಪತ್ತೆಯಾಗಿರುವ ಸುವರ್ಣ ತ್ರಿಭುಜ ಬೋಟ್ ಹಾಗೂ ಏಳು ಮಂದಿ ಮೀನುಗಾರರ ಶೋಧ ಕಾರ್ಯಾಚರಣೆಗಾಗಿ ಜಿಲ್ಲಾ ಪೊಲೀಸ್ ಇಲಾಖೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ (ಇಸ್ರೋ)ದ ಸಹಾಯ ಕೋರಿದೆ.
ಉಪಗ್ರಹದ ಮೂಲಕ ಶೋಧಕಾರ್ಯ ನಡೆಸುವಂತೆ ಇಸ್ರೋ, ಹೈದರಾಬಾದ್‌ನ ಇಂಡಿಯನ್ ನ್ಯಾಷಶಲ್ ಸೆಂಟರ್ ಫಾರ್ ಓಶಿಯನ್ ಇನ್ಫಾರ್ಮೇಶನ್ ಸಿಸ್ಟಮ್‌ (ಐಎನ್‌ಸಿಓಐಎಸ್) ಮತ್ತು ಬೆಂಗಳೂರಿನ ಕರ್ನಾಟಕ ರಾಜ್ಯ ರಿಮೋಟ್ ಸೆನ್ಸಿಂಗ್ ಅಪ್ಲಿಕೇಶನ್ ಸೆಂಟರ್‌ಗೆ ಮಾಹಿತಿ ರವಾನಿಸಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.