ಉಡುಪಿ: ಆತ್ಮನಿರ್ಭರ ಭಾರತ-ಸ್ವದೇಶಿ ಸಂಕಲ್ಪ ಅಭಿಯಾನದ ಅಂಗವಾಗಿ ಬೃಹತ್ ಸ್ವದೇಶಿ ಮೇಳವು ನವೆಂಬರ್ 27ರಿಂದ ದಶಂಬರ 1ರವರೆಗೆ ಉಡುಪಿಯ ದೊಡ್ಡಣ್ಣಗುಡ್ಡೆ ತೋಟಗಾರಿಕಾ ಇಲಾಖೆಯ ರೈತ ಸೇವಾ ಕೇಂದ್ರದಲ್ಲಿ ನಡೆಯಲಿದೆ.
ಸ್ವದೇಶಿ ಕೃಷಿ, ಗುಡಿಕೈಗಾರಿಕೆ ಕೌಶಲ, ಆಹಾರ, ನರ್ಸರಿ ಪ್ರದರ್ಶನ ಮತ್ತು ಮಾರಾಟವನ್ನು ಈ ಮೇಳದಲ್ಲಿ ಆಯೋಜಿಸಲಾಗಿದೆ ಗುಡಿ ಕೈಗಾರಿಕೆ ಪ್ರಾತ್ಯಕ್ಷಿಕೆ ಮಳಿಗೆ, ಸ್ವಉದ್ಯೋಗ ಉದ್ಯಮಗಳನ್ನು ಆರಂಭಿಸಲು ಮತ್ತು ಅಭಿವೃದ್ಧಿಪಡಿಸಲು ಸರಕಾರದ ವಿವಿಧ ಯೋಜನೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಮಾರ್ಗದರ್ಶನ, ಸ್ವದೇಶಿ ಸಂಕಲ್ಪ ಅಭಿಯಾನ, ಜಾಗೃತಿ, ಅರ್ಹ ಸಣ್ಣ ವ್ಯಾಪಾರಿಗಳಿಗೆ ಮತ್ತು ಕುಶಲಕರ್ಮಿಗಳಿಗೆ ಅಭಿನಂದನೆ ಮೊದಲಾದ ಕಾರ್ಯಕ್ರಮಗಳನ್ನು ಈ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಗಿದೆ.


















