ಬೆಳುವಾಯಿ–ಕಾಂತಾವರ ಮಾರ್ಗದಲ್ಲಿ ಗೊಂದಲ; ಬಸ್–ಕಾರು ಮುಖಾಮುಖಿ

ಮೂಡಬಿದಿರೆ: ಸಮೀಪದ ಕಾಂತಾವರ ಕ್ರಾಸ್ನಲ್ಲಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತ ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಯು-ಟರ್ನ್ ತಾತ್ಕಾಲಿಕವಾಗಿ ಬಂದ್ ಮಾಡಿರುವ ಹಿನ್ನೆಲೆಯಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಏಕಾಏಕಿ ಬದಲಾವಣೆ ಉಂಟಾಗಿ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಪಘಾತದಲ್ಲಿ ಎರಡೂ ವಾಹನಗಳು ಜಖಂಗೊಂಡಿದ್ದು, ಸಂಚಾರ ಕೆಲಕಾಲ ಅಸ್ತವ್ಯಸ್ತಗೊಂಡಿತು. ವಿಶೇಷವಾಗಿ ಕಾಂತಾವರದಿಂದ ಬೆಳುವಾಯಿ ಕಡೆಗೆ ಸಾಗುವ ವಾಹನ ಸವಾರರು ಈಗ ಚಿಲಿಂಬಿವರೆಗೆ ತೆರಳಿ ಯು-ಟರ್ನ್ ತೆಗೆದುಕೊಳ್ಳಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಸ್ಥಳೀಯ […]