ನಿಟ್ಟೆ ಕ್ಯಾಂಪಸ್‌ನಲ್ಲಿ 74ನೇ ಸ್ವಾತಂತ್ರ ದಿನಾಚರಣೆ

ನಿಟ್ಟೆ: ಭಾರತದ ಯುವಜನತೆ ದೇಶದ ಅತ್ಯಂತ ದೊಡ್ಡ ಸಂಪತ್ತು. ಭಾರತದ ಸಾಂಸ್ಕೃತಿಕ ಶ್ರೀಮಂತಿಕೆ ಹಾಗೂ ಸ್ನೇಹ ಮನೋಭಾವವನ್ನು ಜಗತ್ತಿಗೆ ಪಸರಿಸುವುದರ ಮೂಲಕ ದೇಶವನ್ನು ಜಾಗತಿಕ ಮಟ್ಟದಲ್ಲಿ ಇನ್ನೂ ಹೆಚ್ಚು ಪ್ರಸಿದ್ಧವಾಗಿಸಲು ಸಾಧ್ಯವಿದೆ” ಎಂದು ಡಾ.ಎನ್.ಎಸ್.ಎ.ಎಂ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಾಸುದೇವ ಭಟ್ ಅಭಿಪ್ರಾಯಪಟ್ಟರು. ನಿಟ್ಟೆ ಸಮೂಹ ವಿದ್ಯಾಸಂಸ್ಥೆಗಳು ಜಂಟಿಯಾಗಿ ಆಯೋಜಿಸಿದ್ದ ೭೪ನೇ ಸ್ವಾತಂತ್ರ್ಯೋತ್ಸವ ಸರಳ ಕಾರ್ಯಕ್ರಮದಲ್ಲಿ ನಿಟ್ಟೆ ಸಮೂಹ ವಿದ್ಯಾಸಂಸ್ಥೆಗಳ ಪ್ರಾಂಶುಪಾಲರು, ನಿಟ್ಟೆ ಕ್ಯಾಂಪಸ್‌ನ ರಿಜಿಸ್ಟ್ರಾರ್ ಪ್ರೊ.ಯೋಗೀಶ್ ಹೆಗ್ಡೆ, ಶಿಕ್ಷಕವೃಂದ, ಶಿಕ್ಷಕೇತರ ವರ್ಗದವರು ಭಾಗವಹಿಸಿದ್ದರು. ಪ್ರಸ್ತುತ ಕೋವಿಡ್-೧೯ […]