ಹತ್ರಾಸ್ ಅತ್ಯಾಚಾರ ಪ್ರಕರಣ ಖಂಡಿಸಿ ಎಬಿವಿಪಿಯಿಂದ ಪ್ರತಿಭಟನೆ; ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹ

ಕುಂದಾಪುರ: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಯುವತಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಖಂಡಿಸಿ ಮತ್ತು ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಂದಾಪುರ ಘಟಕದ ವತಿಯಿಂದ ಕುಂದಾಪುರದ ಮಿನಿ ವಿಧಾನಸೌಧ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಬಿವಿಪಿಯ ಪ್ರಜ್ವಲ್, ಯುವತಿಯ ಮೇಲೆ ನಡೆದ ಅಮಾನವೀಯ ಅತ್ಯಾಚಾರ ಪ್ರಕರಣವನ್ನು ಎಬಿವಿಪಿ ತೀವ್ರವಾಗಿ ಖಂಡಿಸುತ್ತದೆ. ಮಹಿಳೆಯರನ್ನು ಪೂಜಿಸುವ ಪರಂಪರೆಯನ್ನು ಹೊಂದಿರುವ ಜಗತ್ತಿನ ಶ್ರೇಷ್ಠ ದೇಶವಾದ ಭಾರತದಲ್ಲಿ ಇಂತಹ ಕ್ರೂರ […]