ಕ್ರಿಕೆಟ್ ಆಟಗಾರ ರಿಷಭ್ ಪಂತ್ ಬಿಎಂಡಬ್ಲ್ಯು ಕಾರು ಡಿವೈಡರ್‌ಗೆ ಡಿಕ್ಕಿ: ಕಾರಿನಲ್ಲಿ ಬೆಂಕಿ; ಗಂಭೀರ ಗಾಯ

ರೂರ್ಕಿ: ಭಾರತೀಯ ಕ್ರಿಕೆಟಿಗ ರಿಷಬ್ ಪಂತ್ ಅವರ ಕಾರು ದೆಹಲಿಯಿಂದ ಮನೆಗೆ ಮರಳುತ್ತಿದ್ದಾಗ ಅಪಘಾತಕ್ಕೀಡಾಗಿದೆ. ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಅವರ ಕಾರು ಅಪಘಾತಕ್ಕೀಡಾಯಿತು. ಪ್ರಾಥಮಿಕ ಮಾಹಿತಿಯ ಪ್ರಕಾರ, ರಿಷಬ್ ಅವರನ್ನು ಮೊದಲು ರೂರ್ಕಿಯ ಸಕ್ಷಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರನ್ನು ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಿಗಳ ಪ್ರಕಾರ, ಅವರ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ ಮತ್ತು ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಪಂತ್ ತಮ್ಮ ಬಿಎಂಡಬ್ಲ್ಯು ಕಾರನ್ನು ಚಲಾಯಿಸುತ್ತಿದ್ದಾಗ ಘಟನೆ ಸಂಭವಿಸಿದೆ. ಅವರು […]

ಕುಂದಾಪುರ: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕ್ರೇನ್; ಸ್ಥಳದಲ್ಲೇ ಅಸುನೀಗಿದ ಸಹಸವಾರ

ಕುಂದಾಪುರ: ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕ್ರೇನ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನನಲ್ಲಿದ್ದ ಹಿಂಬದಿ ಸವಾರ ಸ್ಥಳದಲ್ಲೇ ಅಸುನೀಗಿದ ಘಟನೆ ಕುಂದಾಪುರ ತಾಲೂಕಿನ ಬಳ್ಕೂರು ಗ್ರಾಮದ ಪಾನಕದಕಟ್ಟೆ ಎಂಬಲ್ಲಿ ಡಿ.26ರಂದು ರಾತ್ರಿ ನಡೆದಿರುವುದಾಗಿ ವರದಿಯಾಗಿದೆ. ತಾಲೂಕಿನ ಹುಣಸೆಮಕ್ಕಿ ಸಮೀಪದ ಹೊಂಬಾಡಿ ನಿವಾಸಿ ಪ್ರಶಾಂತ್ ಮೊಗವೀರ (31) ಮೃತಪಟ್ಟವರು ಎಂದು ಗುರುತಿಸಲಾಗಿದೆ. ದಿನೇಶ್ ಪೂಜಾರಿ ಎಂಬವರ ದ್ವಿಚಕ್ರ ವಾಹನದ ಹಿಂಬದಿಯಲ್ಲಿ ಕುಳಿತಿದ್ದ ಪ್ರಶಾಂತ್, ಕುಂದಾಪುರ ಕಡೆಯಿಂದ ಸಿದ್ದಾಪುರ ಕಡೆಗೆ ತೆರಳುತ್ತಿದ್ದಾಗ ನೋಂದಣಿ ಸಂಖ್ಯೆ ಇಲ್ಲದ ಹೊಸ […]

ಕುದುರೆ ಸವಾರನಿಗೆ ಬಸ್ ಡಿಕ್ಕಿ: ಕುದುರೆ ಸಾವು; ಸವಾರನಿಗೆ ಗಾಯ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸೊಂದು ಕುದುರೆ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಕುದುರೆಯು ಸಾವನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಇಳಂತಿಲ ಗ್ರಾಮದ ಪದುಮಲೆ ಎಂಬಲ್ಲಿ ಭಾನುವಾರ ನಡೆದಿದೆ. ಸಚಿನ್ ಪೆಲಪ್ಪಾರು ಗಾಯಗೊಂಡ ಕುದುರೆ ಸವಾರರಾಗಿದ್ದಾರೆ. ಉಪ್ಪಿನಂಗಡಿಯಲ್ಲಿ ಸಚಿನ್ ಕುದುರೆ ಸವಾರಿ ಮಾಡುತ್ತಿದ್ದ ವೇಳೆ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಸರ್ಕಾರಿ ಬಸ್ಸೊಂದು ಕುದುರೆಗೆ ಢಿಕ್ಕಿ ಹೊಡೆದ ಪರಿಣಾಮ ಕುದುರೆ ಹಾಗೂ ಸವಾರ ಗಾಯಗೊಂಡಿದ್ದು, ಇಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಪ್ಪಿನಂಗಡಿ ಸಮೀಪ ಪಿಲಿಗೂಡಿನ […]

ಪೆರ್ಡೂರು: ಟಿಪ್ಪರ್ ಡಿಕ್ಕಿ ಹೊಡೆದು ವೃದ್ಧ ಸ್ಥಳದಲ್ಲೇ ಸಾವು

ಪೆರ್ಡೂರು: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧರೋರ್ವರಿಗೆ ಟಿಪ್ಪರ್ ಡಿಕ್ಕಿ ಹೊಡೆದು‌‌ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಪೆರ್ಡೂರು ಮೇಲ್ಪೇಟೆಯ ಬಿಎಮ್ ಸ್ಕೂಲ್ ಎದುರು ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ಅಲಂಕಾರು ನಿವಾಸಿ 70 ವರ್ಷದ ಮಂಜಯ್ಯ‌ ಶೆಟ್ಟಿ ಎಂದು ಗುರುತಿಸಲಾಗಿದೆ. ಪೆರ್ಡೂರಿನಿಂದ ಹಿರಿಯಡಕ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಒಂದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಂಜಯ್ಯ ಶೆಟ್ಟಿಗೆ ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ರಸ್ತೆಗೆ ಬಿದ್ದ ಮಂಜಯ್ಯ ಶೆಟ್ಟಿ ಅವರ ತಲೆ ಮೇಲೆ ಟಿಪ್ಪರ್ ನ ಚಕ್ರ […]

ಬಸ್ ಚಕ್ರದಡಿ ಸಿಲುಕಿ ವ್ಯಕ್ತಿ ಸಾವು

ಕಾರ್ಕಳ: ಭಾನುವಾರ ಸಂಜೆ ವ್ಯಕ್ತಿಯೊಬ್ಬರು ಬಸ್ಸಿಗೆ ಹತ್ತುವಾಗ ನಿಯಂತ್ರಣ ತಪ್ಪಿ ಬಸ್ಸಿನ ಚಕ್ರದಡಿಗೆ ಸಿಲುಕಿ ಮೃತಪಟ್ಟ ಘಟನೆ ಹಿರ್ಗಾನದ ಬಸ್ಸು ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ. ಮೃತಪಟ್ಟಿರುವ ವ್ಯಕ್ತಿಯನ್ನು ಚಿಕ್ಕಲ್ ಬೆಟ್ಟಿನ ಕೃಷ್ಣ ನಾಯಕ್(71) ಎಂದು ಗುರುತಿಸಲಾಗಿದೆ. ಇವರು ಹಿರ್ಗಾನದಿಂದ ಚಿಕ್ಕಲ್ ಬೆಟ್ಟು ಕ್ರಾಸಿಗೆ ತೆರಳಲು ಬಸ್ಸು ಹತ್ತುವ ಸಂದರ್ಭ ಆಯತಪ್ಪಿ ಬಿದ್ದು ಬಸ್ಸಿನ ಚಕ್ರದಡಿಗೆ ಸಿಲುಕಿದ್ದಾರೆ. ತಕ್ಷಣವೇ ಅವರನ್ನು ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದುರಾದೃಷ್ಟವಶಾತ್ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರು, […]