ಗೃಹ ಸಚಿವ ಅರಗ ಜ್ಞಾನೇಂದ್ರ ಬೆಂಗಾವಲು ವಾಹನಕ್ಕೆ ಕಾರು ಢಿಕ್ಕಿ; ಭದ್ರಾವತಿ ಬಳಿ ಅಪಘಾತ

ಭದ್ರಾವತಿ: ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಬೆಂಗಾವಲು ವಾಹನಕ್ಕೆ ಎದುರುಗಡೆಯಿಂದ ಬರುತ್ತಿದ್ದಂತ ಮತ್ತೊಂದು ಕಾರು ಢಿಕ್ಕಿ ಹೊಡೆದಿರುವ ಘಟನೆ ಭದ್ರಾವತಿಯ ಜಂಕ್ಷನ್ ಬಳಿ ನಡೆದಿದೆ. ಸಚಿವ ಅರಗ ಜ್ಞಾನೇಂದ್ರ ತುಮಕೂರಿನಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದು ಈ ವೇಳೆ ಎದುರುಗಡೆ ಬರುತ್ತಿದ್ದ ಕಾರೊಂದು ಬೆಂಗಾವಲು ವಾಹನಕ್ಕೆ ಢಿಕ್ಕಿಯಾಗಿದೆ. ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಜೀವ ಉಳಿಸಬೇಕಾದ ಆಂಬ್ಯುಲೆನ್ಸ್ ಜೀವ ತೆಗೆದಾಗ: ಶಿರೂರು ಟೋಲ್ ಬಳಿ ದಾರುಣ ಅಪಘಾತ; ಮೂವರ ಸ್ಥಿತಿ ಗಂಭೀರ ಓರ್ವ ಚಿಂತಾಜನಕ

ಉಡುಪಿ: ಜೀವ ಉಳಿಸಬೇಕಾಗಿರುವ ಆಂಬ್ಯುಲೆನ್ಸ್ ಜೀವ ತೆಗೆಯಲು ಕಾರಣವಾದಂತಹ ದಾರುಣ ಘಟನೆ ಶಿರೂರಿನಲ್ಲಿ ನಡೆದಿದೆ. ಅತೀ ವೇಗದಿಂದ ಬರುತ್ತಿದ್ದ ಆಂಬ್ಯುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಟೋಲ್ ಕಂಬಕ್ಕೆ ಹೊಡೆದಪ್ಪಳಿಸಿ, ಹೊಡೆದ ರಭಸಕ್ಕೆ ಆಂಬುಲೆನ್ಸ್ ಒಳಗಿದ್ದವರು ಹೊರಗೆ ಎಸೆಯಲ್ಪಟ್ಟಿದ್ದಾರೆ. ಇವರಲ್ಲಿ ಮೂವರು ಗಂಭೀರವಾಗಿ ಗಾಯಗೊಂಡರೆ ಮತ್ತು ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಹೊನ್ನಾವರದಿಂದ ಕುಂದಾಪುರಕ್ಕೆ ರೋಗಿಗಳನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ನಿಯಂತ್ರಣ ತಪ್ಪಿ ಟೋಲ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಆಂಬುಲೆನ್ಸ್ ಬರುತ್ತಿದುದ್ದನ್ನು ಕಂಡು ರಸ್ತೆಗಳವಡಿಸಿದ್ದ ಬ್ಯಾರಿಕೇಡ್ ತೆಗೆಯಲು ಧಾವಿಸಿದ ಟೋಲ್ ಗೇಟ್ […]
ಅಂಬಲಪಾಡಿ ಜಂಕ್ಷನ್ ನಲ್ಲಿ ರಸ್ತೆ ಅಫಘಾತ: ಸೈಂಟ್ ಸಿಸಿಲಿ ಹೈಸ್ಕೂಲ್ ಬಾಲಕನ ಸ್ಥಿತಿ ಗಂಭೀರ

ಉಡುಪಿ: ಅಂಬಲಪಾಡಿ ಜಂಕ್ಷನ್ ನಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಅಫಘಾತ ಒಂದರಲ್ಲಿ ಸೈಂಟ್ ಸಿಸಿಲಿಯ ಹೈಸ್ಕೂಲ್ ವಿದ್ಯಾರ್ಥಿ ಆದಿತ್ಯ ಪಿ. ಶೆಟ್ಟಿಗಾರ್ ತೀವ್ರವಾಗಿ ಗಾಯಗೊಂಡಿದ್ದಾನೆ. ಮಾಹಿತಿ ತಿಳಿದು ತಕ್ಷಣವೇ ಸ್ಥಳಕ್ಕೆ ಧಾವಿಸಿದ ಆಪತ್ಭಾಂಧವ ವಿಶು ಶೆಟ್ಟಿ ಅಂಬಲಪಾಡಿ, ಸಾರ್ವಜನಿಕರ ನೆರವಿನಿಂದ ಬಾಲಕನನ್ನು ಚಿಕಿತ್ಸೆಗಾಗಿ ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಿರುವ ಬಗ್ಗೆ ಮಾಹಿತಿ ಇಲ್ಲದ ಕಾರಣ ಆದಿತ್ಯ ತನ್ನ ಸೈಕಲ್ ಮೂಲಕ ಶಾಲೆಗೆ […]
ಪರ್ಕಳ: ರಸ್ತೆಬದಿಯ ಮನೆಗೆ ಉರುಳಿಬಿದ್ದ ಕಂಟೈನರ್; ಚಾಲಕ ಅಪಾಯದಿಂದ ಪಾರು

ಪರ್ಕಳ: ಕೆಳಪರ್ಕಳದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಂಕ್ರಿಟ್ ರಸ್ತೆಯಿಂದ ಡಾಮಾರು ರಸ್ತೆಗೆ ಸಂಪರ್ಕ ಸಾಧಿಸುವ ತಿರುವಿನಲ್ಲಿ ಭಾರಿ ಗಾತ್ರದ ಕಂಟೈನರ್ ಒಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಗೆ ಉರುಳಿಬಿದ್ದ ಘಟನೆ ಭಾನುವಾರ ರಾತ್ರಿ ನಡೆದಿದೆ. ನಿನ್ನೆ ರಾತ್ರಿ ಪರ್ಕಳದಿಂದ ಗೋವಾ ಕಡೆಗೆ ರದ್ದಿ ಪೇಪರ್ ತೆಗೆದುಕೊಂಡು ಹೋಗುತ್ತಿದ್ದ ಕಂಟೈನರ್ ಪರ್ಕಳದ ಶೆಣೈ ಕಂಪೌಂಡ್ ಮೇಲೆ ಮಗುಚಿ ಬಿದ್ದಿದೆ. ಚಾಲಕ ಸಣ್ಣಪುಟ್ಟ ಗಾಯದೊಂದಿಗೆ ಬಚಾವ್ ಆಗಿದ್ದಾನೆ. ಸದ್ಯ ಈ ಮನೆಯಲ್ಲಿ ಯಾರು ವಾಸು ಮಾಡುತ್ತಿಲ್ಲ. ಹೀಗಾಗಿ ಹೆಚ್ಚಿನ […]
ಮಣಿಪಾಲ: ಡಿವೈಡರಿಗೆ ಸ್ಕೂಟರ್ ಡಿಕ್ಕಿ; ಯುವತಿ ಸಾವು

ಮಣಿಪಾಲ: ಸ್ಕೂಟರ್ ಡಿವೈಡರಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರೆ ಮೃತಪಟ್ಟು, ಸಹಸವಾರೆ ಗಾಯಗೊಂಡ ಘಟನೆ ಗುರುವಾರ ಮಣಿಪಾಲ ಟೆಂಪೋ ಸ್ಟ್ಯಾಂಡ್ ಬಳಿ ನಡೆದಿದೆ. ಮೃತಳನ್ನು ಹಿಂದುಜಾ ಎಂದು ಗುರುತಿಸಲಾಗಿದೆ. ವಿದ್ಯಾರತ್ನ ನಗರ ಕೀರ್ತಿ ಸಾಗರ ಅಪಾರ್ಟಮೆಂಟ್ ನ ನಿವಾಸಿ 25 ವರ್ಷದ ಎಂ. ವರ್ಷಿಣಿ ಗಾಯಗೊಂಡಿದ್ದಾರೆ. ವರ್ಷಿಣಿ ಅವರು ಸ್ನೇಹಿತೆ ಹಿಂದುಜಾ ಅವರ ವೆಸ್ಪ ಸ್ಕೂಟರ್ ನಲ್ಲಿ ಹಿಂಬದಿ ಸವಾರೆಯಾಗಿ ಮಣಿಪಾಲ ಟೈಗರ್ ಸರ್ಕಲ್ ನಿಂದ ಸಿಂಡಿಕೇಟ್ ಸರ್ಕಲ್ ಕಡೆಗೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. […]