ಉಡುಪಿಯಲ್ಲಿ ಇಂದ್ರಾಣಿ ನದಿ ಉಳಿಸಿ ಬೃಹತ್ ಅಭಿಯಾನಕ್ಕೆ ಚಾಲನೆ, ಇಂದ್ರಾಣಿ ಶುದ್ಧವಾದರೆ ನಗರದ ಸಮಸ್ಯೆಗಳಿಗೆ ಪರಿಹಾರ: ಶ್ಯಾನ್ ಭಾಗ್

ಉಡುಪಿ ನಗರದಲ್ಲಿ ಇಂದ್ರಾಣಿ ನದಿಯ ಉಳಿವಿಗೆ ಪರಿಸರಾಸಕ್ತ ಯುವಕರ ತಂಡ ಹಮ್ಮಿಕೊಂಡ ಇಂದ್ರಾಣಿ ನದಿ ಉಳಿಸಿ ಅಭಿಯಾನಕ್ಕೆ ಭಾನುವಾರ ಚಾಲನೆ ನೀಡಲಾಯಿತು. ಇಂದ್ರಾಳಿ ಆಂಜನೇಯ ದೇವಳದ ಕೆರೆಯ ಬಳಿ ವಾಹನ ಜಾಥಕ್ಕೆ ಚಾಲನೆ ನೀಡಿದ ಮಾನವ ಹಕ್ಕು ರಕ್ಷಣಾ ಪ್ರತಿಷ್ಠಾನ ಅಧ್ಯಕ್ಷ ಡಾ. ರವೀಂದ್ರನಾಥ ಶ್ಯಾನ್ ಭಾಗ್ ಅವರು ಮಾತನಾಡಿ, ಇಂದ್ರಾಣಿ ನದಿ ಶುದ್ಧವಾದಲ್ಲಿ ನಗರದ ಹಲವು ಸಮಸ್ಯೆಗಳಿಗೆ ಪರಿಹಾರ ಲಭ್ಯವಾಗಲಿದೆ. ಹಿಂದೆ ಇಂದ್ರಾಣಿ ನದಿ ಉಗಮದಿಂದ ಕಡಲು ಸೇರುವ ಮೊದಲು 8 ದೇಗುಲಗಳ ಸರೋವರವನ್ನು ತುಂಬಿಕೊಂಡು […]