ಆಗುಂಬೆ ಘಾಟಿ ಏಳನೆಯ ಕ್ರಾಸ್‌ನಲ್ಲಿ ಹೆಣ್ಣು ಮಗು ಪತ್ತೆ!

ತೀರ್ಥಹಳ್ಳಿ: ಆಗುಂಬೆಯ ದಟ್ಟವಾದ ಕಾಡಿನ ನಡುವೆ ಘಾಟಿಯ ಏಳನೆಯ ತಿರುವಿನಲ್ಲಿ ಹೆಣ್ಣು ಮಗುವೊಂದು ಪತ್ತೆಯಾಗಿದೆ. ನಿನ್ನೆ ರಾತ್ರಿ ಒಂಭತ್ತೂವರೆ ಸಮಯದಲ್ಲಿ ಕಾರೊಂದು ಮಂಗಳೂರಿನಿಂದ ಶಿವಮೊಗ್ಗದ ಕಡೆಗೆ ಹೋಗುತ್ತಿರುವಾಗ ಘಾಟಿಯಲ್ಲಿ ಐದು ವರ್ಷದ ಹೆಣ್ಣು ಮಗುವೊಂದು ಅಳುತ್ತಾ ನಿಂತಿರುವುದನ್ನು ನೋಡಿ ಕಾರು ಚಾಲಕ ತಕ್ಷಣ ಇಳಿದು ಮಗುವನ್ನು ಕರೆದುಕೊಂಡು ಹೋಗಿ ಆಗುಂಬೆ ಪೋಲಿಸ್ ಠಾಣೆಗೆ ಒಪ್ಪಿಸಿದ್ದಾರೆ. ಮಗು ಆಗುಂಬೆ ಠಾಣೆಯಲ್ಲಿ ಸುರಕ್ಷಿತವಾಗಿತ್ತು. ಮಗುವಿನ ಪೋಷಕರು ಯಾರು ಎಂದು ಪೊಲೀಸರು ಪತ್ತೆಹಚ್ಚಲು ಮುಂದಾದಾಗ ಪೋಷಕರ ಬೇಜವಾಬ್ದಾರಿಯೇ ಇದಕ್ಕೆ ಕಾರಣ ಎಂದು […]