ಮಣಿಪಾಲ: 80 ಬಡಗಬೆಟ್ಟು- ಅಲೆವೂರು ಮುಖ್ಯರಸ್ತೆ ಕಾಮಗಾರಿ ಪರಿಶೀಲಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಮಣಿಪಾಲ: ಮಣಿಪಾಲ- 80 ಬಡಗಬೆಟ್ಟು- ಅಲೆವೂರು ಮುಖ್ಯರಸ್ತೆಯು ಸುಮಾರು 8 ಕೋಟಿ 16 ಲಕ್ಷ ರೂಪಾಯಿ ಅನುದಾನದಲ್ಲಿ ಅಭಿವೃದ್ಧಿಗೊಳ್ಳುತ್ತಿದ್ದು ಗುರುವಾರ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು. ಗುಣಮಟ್ಟವನ್ನು ಕಾಯ್ದುಕೊಂಡು ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ 80 ಬಡಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಕೋಟ್ಯಾನ್, ಉಪಾಧ್ಯಕ್ಷೆ ರೂಪಾ ನಾಯಕ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್ ಹಾಗೂ ಲೋಕೋಪಯೋಗಿ […]

ಪುಷ್ಪಾನಂದ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

ಉಡುಪಿ: ಮಂಗಳವಾರದಂದು ಅಲೆವೂರಿನ ಸಂಕಲ್ಪ ಸಭಾಭವನದಲ್ಲಿ ಪುಷ್ಪಾನಂದ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಿಜೆಪಿ ಕಾಪು ಮಂಡಲದ ಅಧ್ಯಕ್ಷ ಶ್ರೀಕಾಂತ ನಾಯಕ್ ಅಲೆವೂರು, ಪುಷ್ಪಾನಂದ ಫೌಂಡೇಶನ್ ವತಿಯಿಂದ ಕಾಪು ಕ್ಷೇತ್ರದ 29 ಗ್ರಾಮಗಳ 2158 ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ವಿತರಿಸುವ ಮೂಲಕ ಯಶ್‍ಪಾಲ್ ಸುವರ್ಣ ತಮ್ಮ ಸಾಮಾಜಿಕ ಬದ್ಧತೆಯನ್ನು ನಿರೂಪಿಸಿದ್ದಾರೆ. ಸಮಾಜ ಸೇವೆಯ ಸಂಕಲ್ಪದೊಂದಿಗೆ ಜಾತಿ ಮತ ಭೇದವಿಲ್ಲದೇ ಪ್ರತಿಭಾನ್ವಿತ ವಿದ್ಯಾರ್ಥಿಗಳ […]

ಗ್ರಾಮ ಪಂಚಾಯತ್ ಉಪ ಚುನಾವಣೆ: ಸಂತೆ, ಜಾತ್ರೆ ನಿಷೇಧ

ಉಡುಪಿ: ಉಡುಪಿ ತಾಲೂಕು ಅಲೆವೂರು ಗ್ರಾಮ ಪಂಚಾಯತ್ ಉಪ ಚುನಾವಣೆಗೆ ಸಂಬಂಧಿಸಿದಂತೆ, ಮೇ 20 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಹಾಗೂ ಸಾರ್ವಜನಿಕರು ಮತ ಚಲಾಯಿಸಲು ಅನುಕೂಲವಾಗುವಂತೆ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದಂತೆ ಚುನಾವಣೆ ನಡೆಯುವ ದಿನದಂದು ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.

ಅಲೆವೂರಲ್ಲಿ‌ ಗ್ರಾಮೀಣ ಕ್ರೀಡಾಕೂಟ: ಗ್ರಾಮೀಣ ಸಂಪ್ರದಾಯ ತಿಳಿಯಲು ಕೆಸರ್ಡೊಂಜಿ ದಿನ ಸಹಕಾರಿ: ದಿನಕರ ಬಾಬು

ಉಡುಪಿ: ಕೃಷಿ ಪ್ರಧಾನ ದೇಶವಾಗಿರುವ ಭಾರತದಲ್ಲಿ ಪ್ರಸ್ತುತ ಕೃಷಿಗೆ ಸಂಬಂಧಿಸಿದ ಗ್ರಾಮೀಣ ಕ್ರೀಡೆಗಳು ನಿಧಾನವಾಗಿ ಮರೆಯಾಗುತ್ತಿವೆ. ಅವುಗಳನ್ನು ಮತ್ತೆ ಮುನ್ನಾಲೆಗೆ ತರಲು ಇಂತಹ ಗ್ರಾಮೀಣ ಕ್ರೀಡಾಕೂಟಗಳು ಸಹಕಾರಿ. ಯುವ ಜನತೆಯನ್ನು ಕೃಷಿಯ ಕಡೆಗೆ ಸೆಳೆಯುವುದರ ಜತೆಗೆ ಅವರಿಗೆ ನಮ್ಮ ಸಂಪ್ರದಾಯ, ಸಂಸ್ಕೃತಿಗಳ ಪರಿಚಯ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಹೇಳಿದರು. ಅಲೆವೂರು ಗುಡ್ಡೆಅಂಗಡಿ ಸಾರ್ವಜನಿಕ ಗಣೇಶೋತ್ಸವ ಸಮಿತಿ, ಯುವಜನ ಸೇವೆ, ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಉಡುಪಿ ಜಿ.ಪಂ. ಸಂಯುಕ್ತ ಆಶ್ರಯದಲ್ಲಿ […]