ಮೂಡಬಿದಿರೆ: ಆಳ್ವಾಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಸಾಧನೆ
ಮೂಡುಬಿದಿರೆ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 8ನೇ ಸೆಮಿಸ್ಟರ್ ಫಲಿತಾಂಶ ಪ್ರಕಟಗೊಂಡಿದ್ದು, ಮೂಡಬಿದಿರೆ ಮಿಜಾರ್ನ ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಸಿಎಸ್ಇ. ವಿಭಾಗದಲ್ಲಿ ಶೇ. 99 ಫಲಿತಾಂಶ ದಾಖಲಾಗಿದ್ದು, 90ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಜಸ್ಮಿನೆ ಪ್ರಿನ್ಸಿಲೋಬೊ ಶೇ.88.71 ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಐಎಸ್ಸಿ ವಿಭಾಗದಲ್ಲಿ ಶೇ.100 ಫಲಿತಾಂಶ ದಾಖಲಾಗಿದೆ. 29 ಮಂದಿ ವಿಶಿಷ್ಟ ಶ್ರೇಣಿ ಗಳಿಸಿದ್ದು, ಹರ್ಷಿತಾ (ಶೇ.88.57 ಅಂಕ) ತರಗತಿಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಇ […]
ಮೂಡಬಿದಿರೆ: ಬೆನ್ನುಮೂಳೆ ಮುರಿತಕ್ಕೊಳಗಾದವರಿಗೆ 3 ದಿನಗಳ ಉಚಿತ ವೈದ್ಯಕೀಯ ಶಿಬಿರಕ್ಕೆ ಚಾಲನೆ
ಮೂಡಬಿದ್ರೆ, ಜೂ. 28: ಬೆನ್ನುಮೂಳೆ ಮುರಿತಕ್ಕೊಳಗಾದವರಿಗೆ ಚಿಕಿತ್ಸೆ, ಸಲಹೆ ನೀಡುವ ಮೂರು ದಿನಗಳ ವೈದ್ಯಕೀಯ ತಪಾಸಣಾ ಶಿಬಿರಕ್ಕೆ ಮೂಡಬಿದ್ರೆಯ ಆಳ್ವಾಸ್ ಹೆಲ್ತ್ ಸೆಂಟರ್ ನಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು. ಆಳ್ವಾಸ್ ಹೆಲ್ತ್ ಸೆಂಟರ್ ನ ವ್ಯವಸ್ಥಾಪಕ ನಿರ್ದೇಶಕ ಡಾ. ವಿನಯ್ ಆಳ್ವ ಉದ್ಘಾಟಿಸಿ ಮಾತನಾಡಿ, ದಿವ್ಯಾಂಗರ ಬದುಕಿಗೆ ಈ ಶಿಬಿರವು ಆಶಾಕಿರಣವಾಗಲಿ ಎಂದು ಶುಭ ಹಾರೈಸಿ, ಇಂತಹ ಶಿಬಿರಕ್ಕೆ ಮುಂದೆಯೂ ಸಹಕಾರ ನೀಡುವುದಾಗಿ ಅಭಿಪ್ರಾಯ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಸೇವಾಭಾರತಿಯ ಅಧ್ಯಕ್ಷರಾದ ಕೆ. ವಿನಾಯಕ ರಾವ್ ಅವರು ಅಧ್ಯಕ್ಷತೆಯ […]
ಆಳ್ವಾಸ್ ಕಾಲೇಜಿಗೆ ನ್ಯಾಕ್ ‘ಎ’ ಗ್ರೇಡ್ ಮಾನ್ಯತೆ; ಸಂಶೋಧನಾ ಕಾರ್ಯಗಳಿಗೆ ಸಹಕಾರಿ: ಮೋಹನ್ ಆಳ್ವ
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಪ್ರವರ್ತಿತ ಆಳ್ವಾಸ್ ಕಾಲೇಜಿಗೆ ಯುಜಿಸಿ ‘ನ್ಯಾಕ್’ ಸಂಸ್ಥೆಯು ‘ಎ’ ಗ್ರೇಡ್ ಮಾನ್ಯತೆ ನೀಡಿದ್ದು, ಹೊಸ ಮಾನ್ಯತಾ ಕ್ರಮ ದಲ್ಲಿ ಸಿಜಿಪಿಎ 3.23 ಪಡೆದಿದೆ. ಈ ಮಾನ್ಯತೆ 5 ವರ್ಷಗಳವರೆಗೆ ಜಾರಿಯಲ್ಲಿರುತ್ತದೆ. ‘ಎ’ ಗ್ರೇಡ್ ಮಾನ್ಯತೆಯಿಂದ ಸಂಶೋಧನಾ ಕಾರ್ಯಗಳಿಗೆ ಸಹಕಾರಿಯಾಗಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕಳೆದ 21 ವರ್ಷಗಳ ಹಿಂದೆ 28 ವಿದ್ಯಾರ್ಥಿ ಗಳು, 2 ಕೋರ್ಸ್ನಿಂದ ಪ್ರಾರಂಭವಾದ ಆಳ್ವಾಸ್ ಸಂಸ್ಥೆ ಈಗ 18 […]
ಜೂನ್ 21-22: 11ನೇ ಆಳ್ವಾಸ್ ಪ್ರಗತಿ- ಬೃಹತ್ ಉದ್ಯೋಗ ಮೇಳ, ದೇಶದ ವಿವಿಧ ಪ್ರತಿಷ್ಟಿತ ಕಂಪೆನಿಗಳು ಭಾಗಿ
ಮಂಗಳೂರು: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ’11ನೇ ಆಳ್ವಾಸ್ ಪ್ರಗತಿ-ಬೃಹತ್ ಉದ್ಯೋಗ ಮೇಳ’ ಜೂನ್. 21 ಮತ್ತು 22ರಂದು ಮೂಡುಬಿದಿರೆಯ ವಿದ್ಯಾಗಿರಿ ಕ್ಯಾಂಪಸ್ನಲ್ಲಿ ನಡೆಯಲಿದೆ. ಈ ಸಂಬಂಧ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಆಳ್ವಾಸ್ ಪ್ರಗತಿ-2019ರ ಆವೃತ್ತಿಯಲ್ಲಿ ಹಲವು ರೀತಿಯಲ್ಲಿ ಉದ್ಯೋಗ ಪಡೆಯಲು ಅವಕಾಶ ಕಲ್ಪಿಸಲಾಗುವುದು. ಪದವಿ ಮತ್ತು ಪದವೀಧರರು, ವೈದ್ಯಕೀಯ ಮತ್ತು ಪ್ಯಾರಾ ಮೆಡಿಕಲ್, ಎಂಜಿನಿಯರಿಂಗ್, ಆರ್ಟ್ಸ್, ಕಾಮರ್ಸ್ ಹಾಗೂ ಮ್ಯಾನೇಜ್ಮೆಂಟ್, ಬೇಸಿಕ್ ಸೈನ್ಸ್, ನರ್ಸಿಂಗ್, […]
ಆಳ್ವಾಸ್ ಕಾಲೇಜು: 2,406 ಮಂದಿಗೆ ಪದವಿ ಪ್ರದಾನ, ಪೋಷಕರ ತ್ಯಾಗ, ಒಡನಾಡಿಗಳ ಸ್ನೇಹ ಮರೆಯದೆ ಸಾಧಕರಾಗಲು ಪ್ರಯತ್ನಿಸಿ: ಡಾ. ಸಚ್ಚಿದಾನಂದ ಕಾಮತ್
ಮೂಡುಬಿದಿರೆ, ಮೇ 4: ಪ್ರತಿಯೊಬ್ಬರಿಗೂ ಸಾಧಿಸಬೇಕೆನ್ನುವ ಇಚ್ಚೆ ಇರುತ್ತದೆ. ಆದರೆ ಪೋಷಕರ ತ್ಯಾಗ, ವಾತ್ಸಲ್ಯ, ಗುರುಗಳ ಮಾರ್ಗದರ್ಶನ, ಒಡನಾಡಿಗಳ ಸ್ನೇಹ ಮರೆಯದೆ, ಪರಿಶ್ರಮ, ನೈತಿಕತೆ, ಸಮಾಜಋಣ ತೀರಿಸುವ ಮನೋಭಾವದಿಂದ ಸಾಧಕರಾಗಲು ಪ್ರಯತ್ನಿಸಿ ಎಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವೈಸ್ಛಾನ್ಸೆಲರ್ ಡಾ| ಸಚ್ಚಿದಾನಂದ್ ಹೇಳಿದರು. ವಿದ್ಯಾಗಿರಿಯ ಕೆ.ವಿ. ಸುಬ್ಬಣ್ಣ ಬಯಲು ರಂಗಮಂದಿರದಲ್ಲಿ ಶನಿವಾರ ಸಂಜೆ ನಡೆದ, ಆಳ್ವಾಸ್ ಎಜುಕೇಶನ್ ಫೌಂಡೇಶನ್ನ 2019ರ ಪದವಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಜೀವನದಲ್ಲಿ ಶ್ರೇಷ್ಠತೆ […]