ಜ. 30ಕ್ಕೆ ‘ನಾವು ಭಾರತೀಯರು’ ಬೃಹತ್ ಪ್ರತಿಭಟನಾ ಸಭೆ: ಅಮೃತ್ ಶೆಣೈ
ಉಡುಪಿ: ಕೇಂದ್ರ ಸರ್ಕಾರದ ಸಿಎಎ, ಎನ್ಆರ್ಸಿ ಹಾಗೂ ಎನ್ಪಿಆರ್ ಕಾಯ್ದೆಯನ್ನು ವಿರೋಧಿಸಿ ‘ನಾವು ಭಾರತೀಯರು’ ಪ್ರತಿಭಟನಾ ಸಭೆಯನ್ನು ಉಡುಪಿ ಕ್ರಿಶ್ಚಿಯನ್ ಹೈಸ್ಕೂಲ್ ಮೈದಾನದಲ್ಲಿ ಜ. 30ರಂದು ಸಂಜೆ 4 ಗಂಟೆಗೆ ಆಯೋಜಿಸಲಾಗಿದೆ ಎಂದು ಸಹಬಾಳ್ವೆ ಉಡುಪಿ ಸಂಘಟನೆಯ ಅಧ್ಯಕ್ಷ ಅಮೃತ್ ಶೆಣೈ ಹೇಳಿದರು. ಬುಧವಾರ ಆದಿಉಡುಪಿಯ ಅಂಬೇಡ್ಕರ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪ್ರತಿಭಟನಾ ಸಭೆಗೂ ಮೊದಲು ಮಧ್ಯಾಹ್ನ 2.30ಕ್ಕೆ ಉಡುಪಿ ಎಸ್ಪಿ ಕಚೇರಿಯಿಂದ ಬಹೃತ್ ಪಾದಯಾತ್ರೆ ಹೊರಡಲಿದೆ. ಪಾದಯಾತ್ರೆಯು ಎಸ್ಪಿ ಕಚೇರಿಯಿಂದ ಆರಂಭಗೊಂಡು ಬನ್ನಂಜೆ, ಸಿಟಿ […]