ನವಸುಮ ರಂಗಮಂಚ ಕೊಡವೂರು‌ ತಂಡ ಪ್ರದರ್ಶಿಸಿದ ‘ಅಂಜಲಿ ಭರ್ ಪಾನಿ’ ನಾಟಕಕ್ಕೆ ಪ್ರಥಮ ಪ್ರಶಸ್ತಿ

ಉಡುಪಿ: ನವಸುಮ ರಂಗಮಂಚ ಕೊಡವೂರು ರಂಗ ತಂಡವು ಹಿಮಾಚಲ ಪ್ರದೇಶದ ಶಿಮ್ಲಾದ ಗಯ್ಟಿ ಥಿಯೇಟರ್‌ನಲ್ಲಿ ನಡೆದ 64ನೇ ರಾಷ್ಟ್ರಮಟ್ಟದ ನಾಟಕ ಸ್ಪರ್ಧೆಯಲ್ಲಿ ಪ್ರದರ್ಶಿಸಿದ ‘ಅಂಜಲಿ ಭರ್‌ ಪಾನೀ’ ಹಿಂದಿ ನಾಟಕಕ್ಕೆ ಪ್ರಥಮ ಪ್ರಶಸ್ತಿ ಲಭಿಸಿದ್ದು, ಆ ಮೂಲಕ ರಾಷ್ಟ್ರಮಟ್ಟದ ಹಿಂದಿ ಭಾಷೆಯ ನಾಟಕ ಸ್ಪರ್ಧೆಯಲ್ಲಿ ಪ್ರಶಸ್ತಿ ಗೆದ್ದ ಕರ್ನಾಟಕದ ಮೊದಲ ತಂಡ ಎಂಬ ಪ್ರಶಂಸೆಗೆ ಪಾತ್ರವಾಗಿದೆ ಎಂದು ನವಸುಮ ರಂಗಮಂಚದ ಅಧ್ಯಕ್ಷ ಬಾಲಕೃಷ್ಣ ಕೊಡವೂರು ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸುಮಾರು 64 ವರ್ಷಗಳಿಂದ ಎಎಐಎ ಸಂಸ್ಥೆಯು […]