ದೈವಾರಾಧಕರಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಿ: ಧೈವಾರಾಧಕರ ಸಹಕಾರಿ ಒಕ್ಕೂಟದ ಆಗ್ರಹ

ಉಡುಪಿ: ತುಳುನಾಡ ಧೈವಾರಾಧಕರ ಸಹಕಾರಿ ಒಕ್ಕೂಟ ಉಡುಪಿ ಜಿಲ್ಲೆ ಇದರ ವತಿಯಿಂದ ಇಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರನ್ನು ನಿವಾಸದಲ್ಲಿ ಭೇಟಿಯಾಗಿ ಕೊರೊನಾ ಸಂದರ್ಭದಲ್ಲಿ ದೈವಾರಾಧಕರಿಗೆ ಆಗುತ್ತಿರುವ ಆರ್ಥಿಕ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು. ದೈವ ಚಾಕ್ರಿ ವರ್ಗದವರಿಗೆ ಸರ್ಕಾರದಿಂದ ತುರ್ತಾಗಿ ಆರ್ಥಿಕ ಪ್ಯಾಕೇಜ್ ಘೋಷಿಸಲು ಸರ್ಕಾರದ ಮೇಲೆ ಒತ್ತಡ ಹಾಕುವಂತೆ ಮನವಿ ಮಾಡಿದರು. ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿರುವ ದೈವ ಚಾಕ್ರಿ ವರ್ಗದವರಿಗೆ ಈವರೆಗೆ ಸರ್ಕಾರದಿಂದ ಯಾವುದೇ ವಿಶೇಷ ಪ್ಯಾಕೇಜ್ ಬಿಡುಗಡೆಯಾಗಿಲ್ಲ. ಅಲ್ಲದೆ 150 ಜನ […]