ಮಾತೃಪಕ್ಷಕ್ಕೆ ಮರಳಿದ ಅರುಣ್ ಕುಮಾರ್ ಪುತ್ತಿಲ? ಬಿಜೆಪಿ ಪಾಳಯದಲ್ಲಿ ಗೊಂದಲ!! ಮೋದಿ ಗೆಲ್ಲಿಸಲು ಸಜ್ಜಾದ ಪುತ್ತಿಲ ಪರಿವಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಬಲ ನಾಯಕ ಅರುಣ್ ಕುಮಾರ್ ಪುತ್ತಿಲ (Arun Kumar Puthila) ಬಿಜೆಪಿ (BJP) ಸೇರ್ಪಡೆ ವಿಚಾರದಲ್ಲಿ ಗೊಂದಲ ಉಂಟಾಗಿದೆ. ಅರುಣ್ ಕುಮಾರ್ ಪುತ್ತಿಲ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಭೇಟಿಯಾಗಿದ್ದು, ಪುತ್ತಿಲ ಬಿಜೆಪಿಗೆ ಮರಳಲಿದ್ದಾರೆ ಎನ್ನಲಾಗಿತ್ತು. ಆದರೆ ಶುಕ್ರವಾರ ಪುತ್ತೂರಿನಲ್ಲಿ ನಡೆದ ಸಭೆಯಲ್ಲಿ ಸ್ಥಳೀಯ ಬಿಜೆಪಿ ನಾಯಕರ ಬೆದರಿಕೆ ನಂತರ ಪುತ್ತಿಲ ಪಕ್ಷ ಸೇರ್ಪಡೆ ಮಾಧ್ಯಮದ ವರದಿಯಷ್ಟೇ ಎಂದು ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿ ಉಲ್ಟಾ ಹೊಡೆದಿದ್ದರು. ಇದೀಗ ಪುತ್ತಿಲ ಅವರು […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಅರುಣ್ ಕುಮಾರ್ ಪುತ್ತಿಲ: ಪುತ್ತಿಲ ಪರಿವಾರದಿಂದ ಘೋಷಣೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ಸ್ಪರ್ಧಿಸಲಿದ್ದಾರೆ. ಕಳೆದ ಹಲವು ದಿನಗಳಿಂದ ಬಿಜೆಪಿ ನಾಯಕರೊಂದಿಗೆ ನಡೆದ ಮಾತುಕತೆ ವಿಫಲಗೊಂಡ ಹಿನ್ನಲೆ ಇದೀಗ ಅರುಣ್ ಕುಮಾರ್ ಪುತ್ತಿಲ ಲೋಕಸಭಾ ಚುನಾವಣೆಗೆ ಪಕ್ಷೇತರರಾಗಿ ಸ್ಪರ್ಧೆ ಮಾಡುತ್ತಾರೆ ಎಂದು ಪುತ್ತಿಲ ಪರಿವಾರ ಘೋಷಿಸಿದೆ. ಪುತ್ತೂರಿನಲ್ಲಿ ಪುತ್ತಿಲ ಪರಿವಾರದಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನಕುಮಾರ್ ಮಾರ್ತಾ, ಅರುಣ್ ಕುಮಾರ್ ಪುತ್ತಿಲ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆ ಎಂದರು. ಬಿಜೆಪಿ […]

ಮಾತೃಪಕ್ಷಕ್ಕೆ ಮರಳಲು ಸಿದ್ದ; ಸ್ಪಂದನೆ ದೊರೆಯದಿದ್ದಲ್ಲಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ನಿಶ್ಚಿತ : ಪುತ್ತಿಲ ಪರಿವಾರ

ಪುತ್ತೂರು: ಪುತ್ತಿಲ ಪರಿವಾರವನ್ನು ಬಿಜೆಪಿಗೆ ಸೇರ್ಪಡೆಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲು ಬಿಜೆಪಿ ನಾಯಕರಿಗೆ ಮೂರು ದಿನಗಳ ಗಡುವು ನೀಡಲಾಗಿದ್ದು ಸಕಾರಾತ್ಮಕ ಸ್ಪಂದನೆ ದೊರೆಯದಿದ್ದಲ್ಲಿ ಪುತ್ತಿಲ ಪರಿವಾರವು ರಾಜಕೀಯ ಕ್ಷೇತ್ರಕ್ಕೆ ಕಾಲಿಡಲಿದೆ ಎಂದು ಪುತ್ತೂರಿನಲ್ಲಿ ನಡೆದ ಪುತ್ತಿಲ ಪರಿವಾರದ ಸಮಾಲೋಚನೆ ಸಭೆಯಲ್ಲಿ ಘೋಷಿಸಲಾಗಿದೆ. ಫೆ.5ರಂದು ಕೊಟೇಚಾ ಸಭಾಂಗಣದಲ್ಲಿ ನಡೆದ ಪುತ್ತಿಲ ಪರಿವಾರದ ಸಮಾಲೋಚನೆ ಸಭೆಯಲ್ಲಿ ಪುತ್ತಿಲ ಪರಿವಾರದ ಪರವಾಗಿ ಮಾತನಾಡಿದ ಶ್ರೀಕೃಷ್ಣ ಉಪಾಧ್ಯಾಯ, ಸಾಮಾನ್ಯ ಕಾರ್ಯಕರ್ತರಾಗಿ ಅರುಣ್‌ಕುಮಾರ್‌ ಬಿಜೆಪಿ ಸೇರಬೇಕು ಎನ್ನುವುದನ್ನು ಯಾವುದೇ ಕಾರ್ಯಕರ್ತರು ಒಪ್ಪುವುದಿಲ್ಲ. ಅರುಣ್‌ 35 […]

ಪುತ್ತೂರಿನಲ್ಲಿ ಅಸ್ತಿತ್ವಕ್ಕೆ ಬಂತು ‘ಪುತ್ತಿಲ ಪರಿವಾರ’: ಗುರು ಗೋವಳ್ಕರ್ ಆಶಯ ಪೂರೈಸಲು ಹೊಸ ಸಂಘಟನೆಯ ಉದಯ

ಪುತ್ತೂರು: ಬಿಜೆಪಿಯಿಂದ ಬಂಡಾಯ ಎದ್ದು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ಬೆವರಿಳಿಸಿದ್ದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ನೇತೃತ್ವದಲ್ಲಿ ಹೊಸ ಸಂಘಟನೆಯೊಂದು ಅಸ್ತಿತ್ವಕ್ಕೆ ಬಂದಿದೆ. ‘ಪುತ್ತಿಲ ಪರಿವಾರ’ ಹೆಸರಿನ ಈ ಸಂಘಟನೆಯನ್ನು ಇಂದು ಲೋಕಾರ್ಪಣೆಗೊಳಿಸಿಲಾಗಿದೆ. ಪುತ್ತೂರಿನಲ್ಲಿ ನಡೆದ ಪುತ್ತಿಲ ಬೆಂಬಲಿಗರ “ನಮ್ಮ ನಡಿಗೆ ಮಹಾಲಿಂಗೇಶ್ವರನ ಕಡೆಗೆ” ಪಾದಯಾತ್ರೆ ಬಳಿಕ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ಬೃಹತ್ ಕಾರ್ಯಕರ್ತರ ಸಭೆಯಲ್ಲಿ ಸಂಘಟನೆಯನ್ನು ಲೋಕಾರ್ಪಣೆಗೊಳಿಸಲಾಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದಂತೆ […]

ಪುತ್ತೂರಿಗೆ ಪುತ್ತಿಲ ಅಭಿಯಾನದ ಬಳಿಕ ಮಂಗಳೂರಿಗೆ ಪುತ್ತಿಲ ಅಭಿಯಾನಕ್ಕೆ ಮುನ್ನುಡಿ: ಸಂಸದ ಅಭ್ಯರ್ಥಿಯಾಗಿ ಘೋಷಿಸಲು ಜನತೆಯ ಕರೆ

ಮಂಗಳೂರು: ಪ್ರಖರ ಹಿಂದುತ್ವವಾದಿ ಅರುಣ್ ಕುಮಾರ್ ಪುತ್ತಿಲ ಪುತ್ತೂರಿನಿಂದ ಬಿಜೆಪಿ ಟಿಕೆಟ್‌ಗೆ ಪ್ರಬಲ ಆಕಾಂಕ್ಷಿಯಾಗಿದ್ದರೂ, ಪಕ್ಷವು ಹಾಲಿ ಶಾಸಕ ಸಂಜೀವ ಮಠಂದೂರು ಅವರಿಗೆ ಟಿಕೆಟ್ ನಿರಾಕರಿಸಿದ್ದಲ್ಲದೆ, ಪುತ್ತೂರಿನಿಂದ ಆಶಾ ತಿಮ್ಮಪ್ಪ ಅವರನ್ನು ಕಣಕ್ಕಿಳಿಸಿತು. ಈ ಹಿಂದೆ ಸಂಘಪರಿವಾರದಲ್ಲಿ ಗುರುತಿಸಿಕೊಂಡಿದ್ದ ಉದ್ಯಮಿ ಅಶೋಕ್ ಕುಮಾರ್ ರೈ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ 66607 ಮತಗಳೊಂದಿಗೆ ಪುತ್ತೂರಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ಜಿದ್ದಾಜಿದ್ದಿನ ಪೈಪೋಟಿ ಇದ್ದಾಗಲೂ ಅರುಣ್ ಕುಮಾರ್ ಪುತ್ತಿಲ ಪಕ್ಷೇತರರಾಗಿ ಸ್ಪರ್ಧಿಸಿ 62458 […]