ಅರುಣಾಚಲ ಪ್ರದೇಶ: ನಾಪತ್ತೆಯಾಗಿದ್ದ ಐವರು ಯುವಕರನ್ನು ಭಾರತಕ್ಕೆ ಹಸ್ತಾಂತರಿಸಿದ ಚೀನಾ

ಇಟಾನಗರ: ಅರುಣಾಚಲ ಪ್ರದೇಶದ ಸುಬನ್‌ಸಿರಿ ಜಿಲ್ಲೆಯಲ್ಲಿ ನಾಪತ್ತೆಯಾಗಿದ್ದ ಐವರು ಯುವಕರು ಪತ್ತೆಯಾಗಿದ್ದು, ಇವರನ್ನು ಚೀನಾ ಸೇನೆಯು ಶನಿವಾರ ಬಿಡುಗಡೆ ಮಾಡಿದೆ. ಅರುಣಾಚಲಪ್ರದೇಶದ ಅಪ್ಪರ್‌ ಸುಬನ್‌ಸಿರಿ ಜಿಲ್ಲೆಯ ಮೆಕ್‌ಮೋಹನ್‌ ಗಡಿರೇಖೆ ಬಳಿ ಸೆ. 1ರಂದು ಬೇಟೆಯಾಡಲು ಕಾಡಿಗೆ ತೆರಳಿದ್ದ ಈ ಐವರು ಯುವಕರು ನಾಪತ್ತೆಯಾಗಿದ್ದರು. ಬಳಿಕ ಚೀನಾದ ಪೀಪಲ್ಸ್‌ ಲಿಬರೇಷನ್‌ ಆರ್ಮಿಯಿಂದ (ಪಿಎಲ್‌ಎ) ಅಪಹರಣಕ್ಕೊಳಗಾಗಿದ್ದರು ಎನ್ನಲಾಗಿತ್ತು. ಯುವಕರು ನಾಪತ್ತೆಯಾಗಿದ್ದ ವಿಷಯವನ್ನು ಭಾರತೀಯ ಸೇನೆಯು ಪಿಎಲ್‌ಎ ಗಮನಕ್ಕೆ ತಂದಿತ್ತು. ಯುವಕರನ್ನು ಪತ್ತೆ ಮಾಡಿದ ಚೀನಾ, ಅವರು ತಮ್ಮಲ್ಲಿ ಇರುವುದನ್ನು ದೃಢಪಡಿಸಿತ್ತು. […]