ಕಾಪು: ಚಂಡಮಾರುತ ಆಶ್ರಯ ತಾಣ ಉದ್ಘಾಟನೆ

ಉಡುಪಿ, ಜೂನ್ 18: ವಿಶ್ವಬ್ಯಾಂಕ್ ನೆರವಿನಲ್ಲಿ ರಾಷ್ಟ್ರೀಯ ಚಂಡಮಾರುತ ಅಪಾಯ ತಗ್ಗಿಸುವಿಕೆ ಯೋಜನೆಯಡಿಯಲ್ಲಿ ಕಾಪುವಿನಲ್ಲಿ ನಿರ್ಮಾಣಗೊಂಡ ವಿವಿದೋದ್ದೇಶ ಚಂಡಮಾರುತ ಆಶ್ರಯ ತಾಣವನ್ನು ಕಂದಾಯ ಸಚಿವ ಆರ್.ವಿ ದೇಶ್‍ಪಾಂಡೆ ಅವರು ಮಂಗಳವಾರ ಉದ್ಘಾಟಿಸಿದರು. ಕಾಪು ಪಡು ಸರಕಾರಿ ಉನ್ನತ ಪ್ರಾಥಮಿಕ ಶಾಲೆ ಆವರಣದಲ್ಲಿ ಸುಮಾರು 2.45 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಈ ಆಶ್ರಯ ತಾಣದಲ್ಲಿ ಪ್ರಾಕೃತಿಕ ವಿಕೋಪಗಳ ತುರ್ತು ಸಂದರ್ಭಗಳಲ್ಲಿ ನಿರ್ವಸಿತರಾಗುವವರಿಗೆ ಆಶ್ರಯ ಕಲ್ಪಿಸಬಹುದು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, 1999 ರಲ್ಲಿ ಒರಿಸ್ಸಾದಲ್ಲಿ ಉಂಟಾದ ಭೀಕರ ಚಂಡಮಾರುತವು […]