ಮೀನುಗಾರಿಕೆಯಲ್ಲಿ ದೇಶದಲ್ಲಿಯೇ ಕರ್ನಾಟಕವನ್ನು ಪ್ರಥಮ ಸ್ಥಾನಕ್ಕೆ ತಲುಪಿಸಲು ಪ್ರಯತ್ನ: ಸಚಿವ ಕೋಟ

ಬೈಂದೂರು: ಮೀನುಗಾರಿಕೆಯಲ್ಲಿ ದೇಶದಲ್ಲಿಯೇ ಕರ್ನಾಟಕವನ್ನು ಪ್ರಥಮ ಸ್ಥಾನಕ್ಕೆ ತಲುಪಿಸಲು ಪ್ರಯತ್ನಿಸಲಾಗುವುದು ಎಂದು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಮೀನುಗಾರಿಕಾ ಜಟ್ಟಿ ಪ್ರದೇಶಗಳಿಗೆ ಇಂದು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ದೇಶದಲ್ಲಿ ಕಡಲ ಮೀನುಗಾರಿಕೆಯಲ್ಲಿ ಕರ್ನಾಟಕ ನಾಲ್ಕನೇ ಸ್ಥಾನದಲ್ಲಿದ್ದು, ಒಳನಾಡು ಮೀನು ಉತ್ಪಾದನೆಯಲ್ಲಿ 9ನೇ ಸ್ಥಾನದಲ್ಲಿದೆ. ಆದರೆ ಈಗ ಮುಖ್ಯಮಂತ್ರಿಗಳ ಪರಿಪೂರ್ಣ ಸಹಕಾರ ಹಾಗೂ ಮೀನುಗಾರಿಕೆಗೆ ಕೊಡುತ್ತಿರುವ ಉತ್ತೇಜನದಿಂದಾಗಿ ಇನ್ನು ಮೂರೇ ವರ್ಷದಲ್ಲಿ ದೇಶದಲ್ಲಿಯೇ ಕರ್ನಾಟಕ […]