ಬಂಟರ ಸಂಘ ಬೆಂಗಳೂರು ಬಿಸುಪರ್ಬ ಸಾಂಸ್ಕೃತಿಕ ಸ್ಪರ್ಧೆ, ಕಾರ್ಕಳ ಬಂಟರ ಸಂಘದ ಮುಡಿಗೆ ಪ್ರಥಮ‌ ಪ್ರಶಸ್ತಿ 

ಬೆಂಗಳೂರು: ಬಂಟರ ಸಂಘ ಬೆಂಗಳೂರು ಸಾಂಸ್ಕೃತಿಕ ಸಮಿತಿಯ ವತಿಯಿಂದ ಬಿಸುಪರ್ಬದ ಅಂಗವಾಗಿ ಆಯೋಜಿಸಲಾಗಿದ ಅಂತರ್ ಬಂಟ್ಸ್ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಕಾರ್ಕಳ ಬಂಟರ ಸಂಘ ಪ್ರಥಮ ಸ್ಥಾನ ಪಡೆದಿದೆ. ದ್ವೀತಿಯ ಪ್ರಶಸ್ತಿಯನ್ನು ಸುರತ್ಕಲ್ ಬಂಟರ ಸಂಘ, ತೃತೀಯ ಪ್ರಶಸ್ತಿಯನ್ನು ಥಾಣೆ ಬಂಟರ ಸಂಘ ಪಡೆದಿದೆ.   ಕಾರ್ಕಳ ಬಂಟರ ಸಂಘದ ಅದ್ಯಕ್ಷ ನಂದಳಿಕೆ ಸುಹಾಸ್ ಹೆಗ್ಡೆ ಅವರ ನೇತೃತ್ವದಲ್ಲಿ  ಭಾಗವಹಿಸಿದ ತಂಡ ತುಳುನಾಡ ಸಿರಿ ಹಾಗು ಬಂಟ ಸಂಸ್ಕೃತಿಯನ್ನು ಪರಿಚಯಿಸುವ ಕಾರ್ಯಕ್ರಮವನ್ನು ನೀಡಿ ಕಲಾಭಿಮಾನಿಗಳ ಪ್ರಶಂಸೆಯೊಂದಿಗೆ ಪ್ರಥಮ ಪ್ರಶಸ್ತಿಯನ್ನು […]

ಹಿರಿಯ ಗಮಕ ಕಲಾವಿದೆ ಗಂಗಮ್ಮ ಕೇಶವಮೂರ್ತಿ ಅವರಿಗೆ ‘ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ’ ಪ್ರದಾನ

ಉಡುಪಿ: ಉಡುಪಿ ರಾಷ್ಟ್ರಕವಿ ಗೋವಿಂದಪೈ ಸಂಶೋಧನ ಕೇಂದ್ರ, ಮಣಿಪಾಲದ ಉನ್ನತ ಶಿಕ್ಷಣ ಅಕಾಡೆಮಿ ಹಾಗೂ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ನಗರದ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಗಮಕ ಕಲಾವಿದೆ ಗಂಗಮ್ಮ ಕೇಶವಮೂರ್ತಿ ಅವರಿಗೆ ‘ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಆ ಬಳಿಕ ಮಾತನಾಡಿದ ಗಂಗಮ್ಮ ಅವರು, ಆಂಗ್ಲ ಭಾಷೆಯ ಪ್ರಭಾವದಿಂದಾಗಿ ಇಂದಿನ ಯುವಕರಲ್ಲಿ ಕನ್ನಡ ಭಾಷೆಯ ಶುದ್ಧತೆ ಇಲ್ಲ. ಹಾಗಾಗಿ ಗಮಕ ಕಲೆ ಬೆಳೆಸುವುದು ತುಂಬಾ ಕಷ್ಟವಾಗಿದೆ. ಯುವಕರು ಗಮಕ […]