ಆಗಸ್ಟ್‌ 5ರಂದು ರಾಮಮಂದಿರಕ್ಕೆ ಭೂಮಿಪೂಜೆ ಹಿನ್ನೆಲೆ: ಅಯೋಧ್ಯೆಯಲ್ಲಿ ಧಾರ್ಮಿಕ ಕಾರ್ಯಕ್ರಮ ಆರಂಭ

ಅಯೋಧ್ಯೆ: ಆಗಸ್ಟ್ 5ರಂದು ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನಡೆಯುವ ಹಿನ್ನೆಲೆಯಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನ ಆರಂಭಗೊಂಡಿದೆ. ರಾಮ್ ಲಲ್ಲಾ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದೆ. ರಾಮ್ ಲಲ್ಲಾ ಮೂರ್ತಿಗೆ ವಿವಿಧ ಬಣ್ಣದ ಬಟ್ಟೆಯ ಅಲಂಕಾರ ಮಾಡಲಾಗುತ್ತಿದೆ. ಪ್ರತಿದಿನ ಒಂದೊಂದು ಬಟ್ಟೆಯನ್ನು ತೊಡಿಸಲಾಗುತ್ತಿದ್ದು, ಸೋಮವಾರ ಬಿಳಿ, ಮಂಗಳವಾರ ಕೆಂಪು, ಬುಧವಾರ ಹಸಿರು ಬಣ್ಣದ ಬಟ್ಟೆಯಿಂದ ಸಿಂಗಾರ ಮಾಡಲಾಗುತ್ತಿದೆ. ಕೇಸರಿ, ಹಲದಿ ಬಣ್ಣದ ಬಟ್ಟೆಯನ್ನು ಸಿದ್ಧ ಪಡಿಸಲಾಗಿದೆ. ಪ್ರಧಾನಿ ಮೋದಿ […]