ಬೈಂದೂರು: ಮೀನು ಹಿಡಿಯಲು ಹೋಗಿ ವ್ಯಕ್ತಿ ಕಾಲು ಜಾರಿ ನದಿಗೆ ಬಿದ್ದು ಮೃತ್ಯು.

ಬೈಂದೂರು: ಬೈಂದೂರು ತಾಲೂಕಿನ ಬಡಾಕೆರೆ ಗ್ರಾಮದ ಕುದ್ರುವಿನ ಸೌಪರ್ಣಿಕ ನದಿಯಲ್ಲಿ ಗಾಳ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿ ಕಾಲು ಜಾರಿ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ಸೋಮವಾರ ಸಂಜೆ ನಡೆದಿದೆ. ಮೃತ ವ್ಯಕ್ತಿಯನ್ನು ಬಡಾಕೆರೆ ಗ್ರಾಮದ ತೊಪ್ಲು ನಿವಾಸಿ ಮುಡೂರ ಎಂಬುವರ ಮಗ ಮಂಜು ಮೊಗವೀರ (57) ಎಂದು ಗುರುತಿಸಲಾಗಿದೆ. ಮಂಜು ಮೊಗವೀರ ಸಮುದ್ರ ಮೀನುಗಾರಿಕೆ ವೃತ್ತಿ ಮಾಡಿಕೊಂಡಿದ್ದು, ತೂಫಾನ್ ಇದ್ದ ಕಾರಣ ಮೀನುಗಾರಿಕೆಗೆ ತೆರಳಿರಲಿಲ್ಲ. ಅದೇ ಕಾರಣಕ್ಕೆ ಮನೆಯಲ್ಲಿ ಕೂರಲು ಮನಸ್ಸಾಗದೇ ಸೌಪರ್ಣಿಕಾ ನದಿಗೆ […]