ಬೈಂದೂರು: ಯುವಕನ ಮೇಲೆ ಕ್ಷುಲ್ಲಕ ಕಾರಣಕ್ಕೆ ಮಾರಣಾಂತಿಕ ಹಲ್ಲೆ
ಕುಂದಾಪುರ: ಹೊಟೇಲ್ ಕೆಲಸ ಮುಗಿಸಿ ಮನೆಗೆ ವಾಪಾಸ್ ಆಗುತ್ತಿದ್ದ ಯುವಕನ ಮೇಲೆ ಕ್ಷುಲ್ಲಕ ಕಾರಣಕ್ಕೆ ಇನ್ನೊಂದು ಯುವಕರ ತಂಡವೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಬುಧವಾರ ಸಂಜೆ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಯಡ್ತರೆ ಜಂಕ್ಷನ್ ಬಳಿ ನಡೆದಿದೆ. ಬೈಂದೂರು ಯಡ್ತರೆ ಬಾಳೆಹಿತ್ಲು ನಿವಾಸಿ ಬಾಬು ದೇವಾಡಿಗರ ಪುತ್ರ ದಿಲೀಪ್ ಕುಮಾರ್ (24) ಗಂಭೀರ ಗಾಯಗಳೊಂದಿಗೆ ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೇ.6 ಸಂಜೆ ದಿಲೀಪ್ ಕುಮಾರ್ ಹಾಗೂ ಆತನ ತಂದೆ ಹೋಟೆಲ್ […]