ಬೆಂಗಳೂರು ಪೊಲೀಸರಿಂದ ಚಂದನ ಚೋರರ ಬಂಧನ: ಒಟ್ಟು 3 ಕೋಟಿ ರೂ. ಮೌಲ್ಯದ ಸೊತ್ತು ವಶ

ಬೆಂಗಳೂರು: ಎಂಟು ಚಂದನ ಚೋರರನ್ನು ಬಂಧಿಸಿರುವ ಹೈಗ್ರೌಂಡ್ಸ್ ಪೊಲೀಸರು, ಒಟ್ಟು 3 ಕೋಟಿ ರೂ. ಮೌಲ್ಯದ 730 ಕೆಜಿ ಶ್ರೀಗಂಧ ಮತ್ತು 170 ಕೆಜಿ ಶ್ರೀಗಂಧದ ಎಣ್ಣೆಯನ್ನು ವಶಪಡಿಸಿಕೊಂಡಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ಗೋವಿಂದ ಸ್ವಾಮಿ, ಕೆ.ಮಧು ಅಲಿಯಾಸ್ ಮಾದ, ವೆಂಕಟೇಶ್, ವರದರಾಜು, ರಮಾಚಂದ್ರ, ವಸೀಮ್ ಬೇಗ್, ರಾಮಚಂದ್ರಪ್ಪ, ನಂಜೇಗೌಡ ಮುಂತಾದವರ ತಂಡವು ಆಗಸ್ಟ್ 1 ರಂದು ಗಾಲ್ಫ್ ಕ್ಲಬ್ ಆವರಣದಲ್ಲಿರುವ ಶ್ರೀಗಂಧದ ಮರವನ್ನು ಕಡಿದು ಹಾಕಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಹಾಯಕ ಪೊಲೀಸ್ […]
ಸಿ.ಬಿ.ಎಸ್.ಸಿ ಫಲಿತಾಂಶ: ಬೆಂಗಳೂರಿಗೆ ಎರಡನೇ ಸ್ಥಾನ, 100% ಫಲಿತಾಂಶ ದಾಖಲಿಸಿದ ಮಂಗಳಮುಖಿ ವಿದ್ಯಾರ್ಥಿಗಳು

ಬೆಂಗಳೂರು ಪ್ರದೇಶವು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿ.ಬಿ.ಎಸ್.ಸಿ) XII ತರಗತಿಯ ಫಲಿತಾಂಶಗಳಲ್ಲಿ 98.16% ರಷ್ಟು ಪ್ರಾದೇಶಿಕವಾರು ಉತ್ತೀರ್ಣತೆಯೊಂದಿಗೆ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಸಿ.ಬಿ.ಎಸ್.ಸಿ ಬೋರ್ಡ್ ಶುಕ್ರವಾರ 12 ನೇ ತರಗತಿಯ ಫಲಿತಾಂಶಗಳನ್ನು ಪ್ರಕಟಿಸಿದ್ದು ಒಟ್ಟಾರೆ ಶೇಕಡಾ 92.71 ತೇರ್ಗಡೆ ಫಲಿತಾಂಶ ಬಂದಿದೆ. ತಿರುವನಂತಪುರ ಪ್ರದೇಶವು 98.83% ಫಲಿತಾಂಶದೊಂದಿಗೆ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. 97.79% ಫಲಿತಾಂಶದೊಂದಿಗೆ ಬೆಂಗಳೂರು ಪ್ರದೇಶವು ಎರಡನೇ ಸ್ಥಾನದಲ್ಲಿದ್ದರೆ, ಚೆನ್ನೈ ಪ್ರದೇಶವು ಮೂರನೇ ಸ್ಥಾನದಲ್ಲಿದೆ. ಶೇ.94.54ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದರೆ, ಶೇ.91.25ರಷ್ಟು ಬಾಲಕರು ಉತ್ತೀರ್ಣರಾಗಿದ್ದಾರೆ. […]
ಶಿರಾಡಿ ಘಾಟ್ ನಲ್ಲಿ ಏಕಮುಖ ಸಂಚಾರ: ಬೆಂಗಳೂರು ಕಡೆಗೆ ತೆರಳುವ ವಾಹನಗಳಿಗೆ ತಾತ್ಕಾಲಿಕ ಪರ್ಯಾಯ ಮಾರ್ಗದ ವ್ಯವಸ್ಥೆ

ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಬರುವ ವಾಹನಗಳಿಗೆ ಶಿರಾಡಿ ಘಾಟ್ ಅನ್ನು ಏಕಮುಖ ಮಾರ್ಗವನ್ನಾಗಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುವ ಮಾರ್ಗವು ಶಿರಾಡಿ ಘಾಟ್ ಮೂಲಕ ಯಥಾವತ್ ಮುಂದುವರಿದರೆ, ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುವ ವಾಹನಗಳು ದೋಣಿಗಲ್ ಬಳಿಯ ಕಪ್ಪಳ್ಳಿ-ಕೆಸಗಾನಹಳ್ಳಿ ಗ್ರಾಮದ ರಸ್ತೆಯಲ್ಲಿ ಸಂಚರಿಸಬೇಕು. ಇದು 2-ಕಿಮೀ ಉದ್ದದ ಮಾರ್ಗವಾಗಿದ್ದು ತಾತ್ಕಾಲಿಕ ಕ್ರಮದ ಭಾಗವಾಗಿ ಪರ್ಯಾಯ ಮಾರ್ಗವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಇನ್ನು 5 ರಿಂದ 6 ದಿನಗಳಲ್ಲಿ ರಸ್ತೆ ಸಿದ್ಧವಾಗಲಿದೆ ಎಂದು ಲೋಕೋಪಯೋಗಿ ಸಚಿವ ಸಿ […]
ನಾಡಪ್ರಭು ಕೆಂಪೇಗೌಡ ಅವರ 513 ನೇ ಜಯಂತಿ ಆಚರಣೆ: ಎಸ್ ಎಂ ಕೃಷ್ಣ, ನಾರಾಯಣ ಮೂರ್ತಿ ಮತ್ತು ಪ್ರಕಾಶ್ ಪಡುಕೋಣೆಗೆ ಕೆಂಪೇಗೌಡ ಪ್ರಶಸ್ತಿ

ಬೆಂಗಳೂರು: ಸೋಮವಾರದಂದು ಮುಖ್ಯಮಂತ್ರಿ ಬಿ.ಎಸ್ ಬೊಮ್ಮಾಯಿ ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಅವರ 513 ನೇ ಜಯಂತಿ ಉತ್ಸವವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮೊದಲ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ, ಇನ್ಫೋಸಿಸ್ ಸಂಸ್ಥೆಯ ಸಹ ಸಂಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಹಾಗೂ ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್ ಪ್ರಕಾಶ ಪಡುಕೋಣೆ ಅವರಿಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ […]
ಬೆಂಗಳೂರು: ನಗರದ ಸಮಸ್ಯೆಗಳ ಕುರಿತು ಬಿಬಿಎಂಪಿ ಅಧಿಕಾರಿಗಳ ಜೊತೆ ನಟ ಅನಿರುದ್ದ್ ಚರ್ಚೆ

ಬೆಂಗಳೂರು: ಶನಿವಾರ ನಮ್ಮ ಬೆಂಗಳೂರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಅವರ ತಂಡದೊಡನೆ ಚಿತ್ರನಟ ಅನಿರುದ್ದ್ ಚರ್ಚೆ ನಡೆಸಿದ್ದಾರೆ. ಬೆಂಗಳೂರು ನಗರ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದ ಅನಿರುದ್ದ್, ಬಿಬಿಎಂಪಿ ಎದುರು ಕೆಲವು ಸಲಹೆಗಳನ್ನು ಮುಂದಿಟ್ಟಿದ್ದಾರೆ. ಘನತ್ಯಾಜ್ಯ ನಿರ್ವಹಣೆ, ಸುರಕ್ಷತೆ, ಹಸಿರು ಹೊದಿಕೆಯ ಹೆಚ್ಚಳ ಮತ್ತು ಆರೋಗ್ಯ ಹಾಗೂ ನೈರ್ಮಲ್ಯ, ಕೆರೆಗಳ ಪುನರುಜ್ಜೀವನ ಮುಂತಾದ ವಿಷಯಗಳ ಕುರಿತು ಸಮಾನ ಸಂಖ್ಯೆಯ ಮಹಿಳೆಯರನ್ನೊಳಗೊಂಡ ವಿಜ್ಞಾನಿಗಳು, ಇಂಜಿನಿಯರ್ ಗಳು, ನಗರ ಯೋಜಕರು, […]