ನಾನು ಐಪಿಎಲ್ ಆಡುವ ಕೊನೇ ದಿನದವರೆಗೂ ಆರ್ ಸಿಬಿ ತಂಡಕ್ಕಾಗಿ ಮಾತ್ರ ಆಡುತ್ತೇನೆ: ಐಪಿಎಲ್ ಟ್ರೋಫಿ ಗೆದ್ದ ಬಳಿಕ ವಿರಾಟ್ ಕೊಹ್ಲಿ ಭಾವುಕ ಮಾತು.

ಅಹಮದಾಬಾದ್: ನನ್ನ ಹೃದಯ ಬೆಂಗಳೂರಿಗಾಗಿ, ನನ್ನ ಆತ್ಮ ಬೆಂಗಳೂರಿಗಾಗಿ, ನಾನು ಐಪಿಎಲ್ ಆಡುವ ಕೊನೇ ದಿನದವರೆಗೂ ಇದೇ ತಂಡಕ್ಕಾಗಿ ಆಡುತ್ತೇನೆ. ಐತಿಹಾಸಿಕ ಐಪಿಎಲ್ ಟ್ರೋಫಿ ಗೆದ್ದ ಬೆನ್ನಲ್ಲಿ ವಿರಾಟ್ ಕೊಹ್ಲಿ ಅವರು ಹೇಳಿದ ಮಾತುಗಳಿವು. ಸಂದರ್ಶನದಲ್ಲಿ ಮಾತಾನಾಡಿದ ಅವರು, ನಾನು ಈ ರಾತ್ರಿ ಮಗುವಿನಂತೆ ಮಲಗುತ್ತೇನೆ ಎಂದು ಹೇಳಿದ್ದರಲಲ್ದೇ. ನನ್ನ ಹೃದಯ, ಆತ್ಮ ಎರಡೂ ಬೆಂಗಳೂರಿಗಾಗಿಯೇ.. ಐಪಿಎಲ್ ಆಡುವ ಕೊನೇ ದಿನದವರೆಗೂ ಇದೇ ತಂಡಕ್ಕಾಗಿ ಆಡುತ್ತೇನೆ ಎಂದು ಭಾವುಕವಾಗಿ ನುಡಿದರು. ನಾನು ಪ್ರಭಾವಿ ಆಟಗಾರನಾಗಿ ಆಡಲು ಬಯಸುವುದಿಲ್ಲ, […]