ಮಂಗಳೂರು: ದ್ವಿಚಕ್ರ ವಾಹನ ಢಿಕ್ಕಿ; ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು.

ಬಂಟ್ವಾಳ : ದ್ವಿಚಕ್ರ ವಾಹನ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಬಿ.ಸಿ.ರೋಡಿನ ಎಲ್ಐಸಿ ಕಚೇರಿ ಮುಂಭಾಗ ನಡೆದಿದೆ. ಉಪ್ಪಿನಂಗಡಿ ಸಮೀಪದ ನಟ್ಟಿಬೈಲು ಎಂಬಲ್ಲಿನ ನಿವಾಸಿ ಕೆ.ಸದಾರಾಮ ಅವರ ಪತ್ನಿ ಸರಸ್ವತಿ (50) ಮೃತ ಮಹಿಳೆ. ಮೃತರ ಪತಿ ಎಲ್ಐಸಿ ಏಜೆಂಟ್ ಆಗಿದ್ದು, ಕಚೇರಿಯಲ್ಲಿ ಕಾರ್ಯಕ್ರಮ ಇದ್ದ ಕಾರಣ ಸರಸ್ವತಿ ಅವರು ಬಂದಿದ್ದರು. ಎಲ್ಐಸಿ ಕಚೇರಿಯಿಂದ ಮರಳುತ್ತಿರುವಾಗ, ಉಪ್ಪಿನಂಗಡಿಗೆ ತೆರಳಲು ರಸ್ತೆ ದಾಟುತ್ತಿದ್ದ ವೇಳೆ ಸ್ಕೂಟರ್ ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ತಲೆಯ ಭಾಗಕ್ಕೆ […]