ಬೀಜಾಡಿ ಸರ್ವೀಸ್ ರಸ್ತೆ ಕಾಮಗಾರಿ: ಅಧಿಕಾರಿಗಳಿಂದ ಸರ್ವೇ ಕಾರ್ಯ

ಕುಂದಾಪುರ: ಇಲ್ಲಿನ ಬೀಜಾಡಿ ಸರ್ವೀಸ್ ರಸ್ತೆ ಕಾಮಗಾರಿ ಶೀಘ್ರವೇ ಪ್ರಾರಂಭಿಸಲು ಜಿಲ್ಲಾಧಿಕಾರಿ ಆದೇಶ ನೀಡಿದ ಬೆನ್ನಲ್ಲೇ ಸೋಮವಾರ ಸಂಜೆ ಕುಂದಾಪುರ ಸಹಾಯಕ ಆಯುಕ್ತ ಅರುಣಪ್ರಭಾ ನೇತೃತ್ವದಲ್ಲಿ ನವಯುಗ ಕಂಪೆನಿ ಅಧಿಕಾರಿಗಳು ಭೇಟಿ ನೀಡಿ ಸರ್ವೇ ಕಾರ್ಯ ನಡೆಸಿದರು. ಎನ್‌ಎಚ್‌ಐನ ಯೋಜನಾ ನೀರ್ದೇಶಕ ಸ್ಯಾಮ್‌ಸಂಗ್ ವಿಜಯಕುಮಾರ್ ಮತ್ತು ನವಯುಗ ಚೀಫ್ ಪ್ರಾಜೆಕ್ಟ್ ಮ್ಯಾನೇಜರ್ ಶಂಕರರಾವ್, ಇಂಜಿನಿಯರ್ ರಾಘವೇಂದ್ರ ಮತ್ತಿತರರ ತಂಡ ಭೇಟಿ ನೀಡಿ ಬಾಕಿ ಉಳಿದ ಕಾಮಗಾರಿಗಳ ಬಗ್ಗೆ ಸರ್ವೆ ಕಾರ್ಯ ನಡೆಸಿ ಫೆ.೧೦ರಿಂದ ಬೀಜಾಡಿ ಸರ್ವೀಸ್ ರಸ್ತೆ […]