ಕುದುರೆ ಸವಾರನಿಗೆ ಬಸ್ ಡಿಕ್ಕಿ: ಕುದುರೆ ಸಾವು; ಸವಾರನಿಗೆ ಗಾಯ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸೊಂದು ಕುದುರೆ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಕುದುರೆಯು ಸಾವನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಇಳಂತಿಲ ಗ್ರಾಮದ ಪದುಮಲೆ ಎಂಬಲ್ಲಿ ಭಾನುವಾರ ನಡೆದಿದೆ. ಸಚಿನ್ ಪೆಲಪ್ಪಾರು ಗಾಯಗೊಂಡ ಕುದುರೆ ಸವಾರರಾಗಿದ್ದಾರೆ. ಉಪ್ಪಿನಂಗಡಿಯಲ್ಲಿ ಸಚಿನ್ ಕುದುರೆ ಸವಾರಿ ಮಾಡುತ್ತಿದ್ದ ವೇಳೆ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಸರ್ಕಾರಿ ಬಸ್ಸೊಂದು ಕುದುರೆಗೆ ಢಿಕ್ಕಿ ಹೊಡೆದ ಪರಿಣಾಮ ಕುದುರೆ ಹಾಗೂ ಸವಾರ ಗಾಯಗೊಂಡಿದ್ದು, ಇಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಪ್ಪಿನಂಗಡಿ ಸಮೀಪ ಪಿಲಿಗೂಡಿನ […]

ಜಗತ್ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಭ್ರಮದ ಚಂಪಾ ಷಷ್ಠಿ ಮಹೋತ್ಸವ

ಮಂಗಳೂರು: ಐತಿಹಾಸಿಕ ಮಾನ್ಯತೆಯಿರುವ ಕಾರ್ನಿಕದ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಮಹೋತ್ಸವವು ಸಂಭ್ರಮ-ಸಡಗರದಿಂದ ಜರುಗಿತು. ಮಂಗಳವಾರದಂದು ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಅದ್ಧೂರಿಯಾಗಿ ನೆರವೇರಿತು. ಕುಕ್ಕೆ ಸುಬ್ರಹ್ಮಣ್ಯ ದೇವರು ರಥದಲ್ಲಿ ಕುಳಿತು ರಥಬೀದಿಯಲ್ಲಿ ಸಂಚರಿಸಿ ಭಕ್ತರಿಗೆ ದರ್ಶನವನ್ನಿತ್ತರು.ವೃಶ್ಚಿಕ ಲಗ್ನದಲ್ಲಿ ದೇವರ ವಿಗ್ರಹಗಳ ಬ್ರಹ್ಮರಥಾರೋಹಣ ನಡೆಯಿತು. ಉಮಾಮಹೇಶ್ವರ ರಥೋತ್ಸವದ ಬಳಿಕ ಚಂಪಾಷಷ್ಠಿ ಮಹಾರಥೋತ್ಸವ ನಡೆಯಿತು. ಸೋಮವಾರ ರಾತ್ರಿ ಪಂಚಮಿ ರಥೋತ್ಸವ ನಡೆಯಿತು. ಸುಮಾರು 163 ಭಕ್ತರು ಎಡೆಸ್ನಾನ ಸೇವೆ ನೆರವೇರಿಸಿದರು. ಗೋವಿಗೆ ನೈವೇದ್ಯ ಅರ್ಪಿಸಿದ […]

ಸಮವಸರಣ ಪೂಜೆಯೊಂದಿಗೆ ಧರ್ಮಸ್ಥಳ ಲಕ್ಷದೀಪೋತ್ಸವ ಕಾರ್ಯಕ್ರಮಕ್ಕೆ ತೆರೆ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಗುರುವಾರದಂದು ರಾತ್ರಿ ಬಸದಿಯಲ್ಲಿ ಭಗವಾನ್‌ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆಯೊಂದಿಗೆ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಮುಕ್ತಾಯವಾದವು. ಪಂಚನಮಸ್ಕಾರ ಮಂತ್ರ ಪಠಣದೊಂದಿಗೆ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ, ಭಗವಾನ್ ಶ್ರೀ ಬಾಹುಬಲಿ ಸ್ವಾಮಿ, ಶ್ರುತದೇವಿ ಹಾಗೂ ಗಣಧರ ಪರಮೇಷ್ಠಿಗಳ ಅಷ್ಟವಿಧಾರ್ಚನೆ ಪೂಜೆ ಸುಶ್ರಾವ್ಯ ಗಾಯನದೊಂದಿಗೆ ಸಂಪನ್ನಗೊಂಡಿತು. ಬಾಹುಬಲಿ ಸೇವಾ ಸಮಿತಿಯ ಶ್ರಾವಕರು, ಶ್ರಾವಕಿಯರಿಂದ ಸುಶ್ರಾವ್ಯವಾಗಿ ಭಕ್ತಿಗೀತೆಗಳ ಗಾಯನ ಪೂಜೆಗೆ ವಿಶೇಷ ಮೆರುಗನ್ನು ನೀಡಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಷಟ್ಕಂಡಾಗಮಾಧಾರಿತ ಸಿದ್ಧಾಂತ ಚಿಂತಾಮಣಿಗ್ರಂಥವನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. […]

ಶಾಸಕ ಹರೀಶ್ ಪೂಂಜಾ ಬೆದರಿಕೆ ಪ್ರಕರಣ: ಸಿಐಡಿಗೆ ಹಸ್ತಾಂತರ

ಬೆಳ್ತಂಗಡಿ: ಕಾರು ಓವರ್ ಟೇಕ್ ವಿಷಯದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ತಲವಾರು ತೋರಿಸಿ ಬೆದರಿಕೆ ಹಾಕಿದ್ದಾರೆನ್ನಲಾದ ಪ್ರಕರಣವನ್ನು ಸಿಐಡಿ ತನಿಖೆಗೆ ಹಸ್ತಾಂತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಿಐಡಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಅ.13ರ ರಾತ್ರಿ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಎಂಬಲ್ಲಿ ಬೇರೊಂದು ಕಾರಿನಲ್ಲಿದ್ದ ವ್ಯಕ್ತಿ ಶಾಸಕ ಹರೀಶ್ ಪೂಂಜಾ ಕಾರನ್ನು ಬೆನ್ನಟ್ಟಿ ಅಡ್ಡಗಟ್ಟಿ ತಲವಾರು […]

ಶಾಸಕ ಹರೀಶ್ ಪೂಂಜಾಗೆ ಜೀವ ಬೆದರಿಕೆ: ದುಷ್ಕರ್ಮಿಗಳನ್ನು ಶೀಘ್ರ ಬಂಧಿಸುವಂತೆ ಜಿಲ್ಲಾ ಬಿಜೆಪಿ ಒತ್ತಾಯ

ಉಡುಪಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರ ವಾಹನ ತಡೆದು, ತಲವಾರು ಝಳಪಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಒಡ್ಡಿರುವ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸುವಂತೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಮತ್ತು ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ. ಕರಾವಳಿ ಜಿಲ್ಲೆಯು ಅನೇಕ ದಿನಗಳಿಂದ ಶಾಂತಿಯ ವಾತಾವರಣದಲ್ಲಿದ್ದು, ಕೆಲವು ಶಕ್ತಿಗಳು ಅಶಾಂತಿ ನಿರ್ಮಿಸಲು ಪ್ರಯತ್ನಿಸುತ್ತಿದ್ದಾರೆ, ಪಕ್ಷದ ಶಾಸಕರಾದ ಹರೀಶ್ ಪೂಂಜಾ ರವರು ನಿನ್ನೆ ರಾತ್ರಿ ಊರಿಗೆ ವಾಪಾಸು ಬರುತ್ತಿದ್ದ ಸಂದರ್ಭ ಕಾರಿಗೆ ಅಡ್ಡಹಾಕಿ […]