ಶ್ರೀ ಸೌತಡ್ಕ ಗಣಪತಿ ದೇವಾಲಯದ ಹರಕೆ ಘಂಟೆ ಮಾರಾಟ ಆರೋಪ: ತನಿಖೆಗೆ ಸಚಿವ ಕೋಟ ಆದೇಶ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಕೊಕ್ಕಡ ಶ್ರೀ ಸೌತಡ್ಕ ಗಣಪತಿ ದೇವಾಲಯದ ಹರಕೆ ಘಂಟೆ ಮಾರಾಟ ವಿಚಾರದಲ್ಲಿ ಸ್ಥಳೀಯ ಶಾಸಕ  ಹರೀಶ್ ಪೂಂಜ ಅವರ ದೂರಿನಂತೆ, ಇಡೀ ಪ್ರಕರಣವನ್ನು ಸೂಕ್ತ ತನಿಖೆಗೆ ಒಳಪಡಿಸಿ, ದೇವಸ್ಥಾನದ ಕಾರ್ಯನಿರ್ವಹಣ ಅಧಿಕಾರಿ ಮೇಲೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು, ರಾಜ್ಯ ಧಾರ್ಮಿಕ ದತ್ತಿ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಇಲಾಖೆಯ ಆಯುಕ್ತರಿಗೆ ನೀಡಿದ ಆದೇಶದಲ್ಲಿ ತಿಳಿಸಿದ್ದು, ಅಗತ್ಯವಿದ್ದಲ್ಲಿ ಕಾರ್ಯನಿರ್ವಹಣಾ ಅಧಿಕಾರಿಯವರನ್ನು ಅಮಾನತು ಮಾಡಿ, ಪಾರದರ್ಶಕ ತನಿಖೆ ಮಾಡಬೇಕೆಂದು […]