ಭಾರತ್ ಜೋಡೋ ಯಾತ್ರೆ ಪೋಸ್ಟರ್‌ನಲ್ಲಿ ಸಾವರ್ಕರ್: ದುಷ್ಕರ್ಮಿಗಳ ಕೃತ್ಯ ಎಂದ ಕಾಂಗ್ರೆಸ್

ಮಂಡ್ಯ: ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯ ಪೋಸ್ಟರಿನಲ್ಲಿ ವಿನಾಯಕ ದಾಮೋದರ್ ಸಾವರ್ಕರ್ ಅವರ ಚಿತ್ರವನ್ನು ಹಾಕಲಾಗಿದ್ದು, ಕಾಂಗ್ರೆಸ್ ಪಕ್ಷವು ಇದು ಯಾರೋ ದುಷ್ಕರ್ಮಿಗಳ ಕೃತ್ಯ ಎಂದು ಆರೋಪಿಸಿದೆ. ಈ ಹಿಂದೆ ಕೇರಳದಲ್ಲಿಯೂ ಸಾವರ್ಕರ್ ಅವರ ಚಿತ್ರವನ್ನು ಹೊಂದಿರುವ ಪೋಸ್ಟರ್ ಒಂದನ್ನು ಹಾಕಲಾಗಿತ್ತು. ಇದೀಗ ಮಂಡ್ಯದಲ್ಲಿ ರಾಹುಲ್ ಗಾಂಧಿ ಇರುವ ಪೋಸ್ಟರಿನಲ್ಲಿ ಮತ್ತೆ ಸಾವರ್ಕರ್ ಭಾವಚಿತ್ರ ಹಾಕಲಾಗಿರುವುದು ಪಕ್ಷಕ್ಕೆ ಮುಜುಗರ ಉಂಟು ಮಾಡಿದೆ.

ಭಾರತ್ ಜೋಡೋ ಯಾತ್ರೆ: ಕರ್ನಾಟಕಕ್ಕೆ ಆಗಮಿಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ

ಮೈಸೂರು: ಕಾಂಗ್ರೆಸ್ ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಅವರು ಅಕ್ಟೋಬರ್ 6 ರಂದು ಮಂಡ್ಯದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಹೇಳಿದ್ದಾರೆ. ಸೋನಿಯಾ ಗಾಂಧಿ ಅವರು ಮಡಿಕೇರಿಗೆ ತೆರಳಿ ಖಾಸಗಿ ರೆಸಾರ್ಟ್‌ನಲ್ಲಿ ತಂಗಲಿದ್ದಾರೆ ಎನ್ನಲಾಗಿದೆ. ಮೈಸೂರು ಭಾಗದ ಯಾತ್ರೆ ಮುಗಿಸಿ ಮಡಿಕೇರಿಯಲ್ಲಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲು ರಾಹುಲ್ ಗಾಂಧಿ ತೆರಳಲಿದ್ದಾರೆ. ಅಕ್ಟೋಬರ್ 6 ರಂದು ಭಾರತ್ ಜೋಡೋ ಯಾತ್ರೆಯನ್ನು […]

ಕಾಂಗ್ರೆಸ್ ಭಾರತವನ್ನು ಎಲ್ಲಿ ವಿಭಜಿಸಿತ್ತೋ ಅಲ್ಲೇ ಜೋಡಿಸಲಿ: ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ

ಉಡುಪಿ: ನಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಭಾರತವನ್ನು ಎಲ್ಲಿ ವಿಭಜನೆ ಮಾಡಿದೆಯೋ ಅಲ್ಲಿ ಹೋಗಿ ಭಾರತ್ ಜೋಡೋ ಮಾಡಬೇಕು. ಕಾಂಗ್ರೆಸ್ ನ ನೇತೃತ್ವದ ಸರ್ಕಾರ ಇರುವ ಸಂದರ್ಭದಲ್ಲಿ ಪಾಕ್ ಆಕ್ರಮಿತ ಕಾಶ್ಮೀರವಾಯಿತು. ಇವತ್ತಿನ ಪಾಕ್ ಆಕ್ರಮಿತ ಕಾಶ್ಮೀರ ಯಾರ ಕೊಡುಗೆ? ಕಾಂಗ್ರೆಸ್ಸಿನ ಕೊಡುಗೆ. ತೀನ್ ಭೀಗಾ ಎನ್ನುವ ಆಯಕಟ್ಟಿನ ಪ್ರದೇಶವನ್ನು 99 ವರ್ಷಕ್ಕೆ ಗುತ್ತಿಗೆ ಕೊಟ್ಟಿದ್ದು […]