ಬ್ರಹ್ಮಾವರದಲ್ಲಿ ಐತಿಹಾಸಿಕ ಬಿಲ್ಲವ ಮಹಾಸಮಾವೇಶ:50 ಸಾವಿರಕ್ಕೂ ಅಧಿಕ ಜನಸಾಗರ

ಉಡುಪಿ: ಬ್ರಹ್ಮಾವರ ಗಾಂಧಿ ಮೈದಾನದಲ್ಲಿ ಫೆ. 3ರಂದು ನಡೆದ   ‘ಉಡುಪಿ ಜಿಲ್ಲಾ ಬಿಲ್ಲವ ಮಹಾ ಸಮಾವೇಶ’ ಸುಮಾರು 50 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ಮೂಲಕ ಕಾರ್ಯಕ್ರಮ  ಯಶಸ್ವಿಯಾಗಿ ಜರಗಿತು . ಧರ್ಮಸ್ಥಳ ಕನ್ಯಾಡಿ ಶ್ರೀರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಕಾರ್ಕಳ ಬೊಲ್ಯೊಟ್ಟು ಶ್ರೀ ಗುರುದೇವಾಶ್ರಮದ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಶೀರ್ವಚಿಸಿದರು . ಸಮಾವೇಶದ ಅಧ್ಯಕ್ಷ ಬಿ.ಎನ್‌. ಶಂಕರ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು . ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ  ಡಾ| ಜಯಮಾಲಾ ಕಾರ್ಯಕ್ರಮ ಉದ್ಘಾಟಿಸಿದರು. […]