ಬಿಲ್ವಪತ್ರೆ ಆರಾಧನೆಗೂ ಶ್ರೇಷ್ಠ ಆರೋಗ್ಯಕ್ಕೂ ಉತ್ತಮ: ಪೇಜಾವರ ಶ್ರೀ

ಉಡುಪಿ: ಅರಣ್ಯ ಇಲಾಖೆ ಸಾಮಾಜಿಕ ಅರಣ್ಯ ವಿಭಾಗ ಉಡುಪಿ ಹಾಗೂ ಪೇಜಾವರ ಮಠದ ಜಂಟಿ ಆಶ್ರಯದಲ್ಲಿ ಎಸ್ಎಂಎಸ್ ಪಿ ಸಂಸ್ಕೃತ ಕಾಲೇಜಿನ ಎನ್ಎಸ್ ಎಸ್ ಘಟಕಗಳ ಸಹಯೋಗದಲ್ಲಿ ಶ್ರೀಕೃಷ್ಣ ಜಯಂತಿ ಪ್ರಯುಕ್ತ ಇಂದಿನಿಂದ ಮೂರು ದಿನಗಳ ಕಾಲ ಸಂಸ್ಕೃತ ಕಾಲೇಜಿನ ಆವರಣದಲ್ಲಿ ಆಯೋಜಿಸಿರುವ ಭಕ್ತರಿಗೆ ಉಚಿತ ಬಿಲ್ವಪತ್ರೆ ಸಸಿ ವಿತರಣೆ ಕಾರ್ಯಕ್ರಮಕ್ಕೆ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಭಾನುವಾರ ಚಾಲನೆ ನೀಡಿದರು.   ಬಳಿಕ ಶ್ರೀಪಾದರು ಮಾತನಾಡಿ, ಉಡುಪಿ ನಾಗರಿಕರು, ಭಕ್ತರು ಆರಾಧನೆ ಹಾಗೂ ಆರೋಗ್ಯಕ್ಕೆ ಶ್ರೇಷ್ಠವಾಗಿರುವ […]