ಸೆ.14ರಿಂದ ಅ. 2ರ ವರೆಗೆ ಬಿಜೆಪಿ ಸೇವಾ ಸಪ್ತಾಹ

ಉಡುಪಿ: ಸೇವಾ ಹೀ ಸಂಘಟನೆ ಪರಿಕಲ್ಪನೆಯಡಿ ಸೆ.14 ರಿಂದ ಅ. 2ರ ವರೆಗೆ ಸೇವಾ ಸಪ್ತಾಹ, ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಹಾಗೂ ಮಹಾತ್ಮಾಗಾಂಧಿ ಜಯಂತಿ ಸಂಬಂಧಿಸಿ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಬಗ್ಗೆ ಬುಧವಾರ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾಹಿತಿ ನೀಡಿ, ಜಿಲ್ಲೆಯ ಪ್ರತಿ ಮಂಡಲದಲ್ಲಿ 70 ಅಂಗವಿಕಲರಿಗೆ ಕೃತಕ ಅಂಗ ಜೋಡಣೆ, ಉಚಿತ ಕನ್ನಡಕ, ಬಡ ಕಾಲೋನಿಗಳಿಗೆ ತೆರಳಿ ಹಣ್ಣು ವಿತರಣೆ, ಕೋವಿಡ್ ಪೀಡಿತರಿಗೆ ಪ್ಲಾಸ್ಮಾದಾನ ಕಾರ್ಯಕ್ರಮಗಳು ನಡೆಯಲಿದೆ. […]