ಕಾರ್ಕಳ ಬಿಜೆಪಿ ವತಿಯಿಂದ ಸುನಿಲ್ ಕುಮಾರ್ ವಿಜಯೋತ್ಸವ ಕಾರ್ಯಕರ್ತರಿಗೆ ಅಭಿನಂದನೆ ಕಾರ್ಯಕ್ರಮ

ಕಾರ್ಕಳ: ಭಾನುವಾರದಂದು ಬಿಜೆಪಿ ಕಾರ್ಕಳ ವತಿಯಿಂದ ಸುನೀಲ್ ಕುಮಾರ್ ವಿಜಯೋತ್ಸವ, ಮತದಾರರಿಗೆ ವಂದನೆ ಹಾಗೂ ಕಾರ್ಯಕರ್ತರಿಗೆ ಅಭಿನಂದನೆ ಕಾರ್ಯಕ್ರಮ ನಡೆಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಅವರು, ಪ್ರಮೋದ್ ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್, ಅವರು ಹಣಕ್ಕಾಗಿ ಏನು ಮಾಡಲೂ ಸಿದ್ದ. ಅವರು ಪ್ರಹ್ಲಾದ್ ಜೋಷಿ, ಅನಂತ್ ಕುಮಾರ್ ವಿರುದ್ಧ ಸ್ಪರ್ಧಿಸಿ ಸೋತರು, ಎಲ್ಲಾ ಕಡೆಗಳಲ್ಲಿ ಸೋತು ಡೀಲ್ ಕುದುರಿಸುವವರು. ಟೈಗರ್ ಗ್ಯಾಂಗ್ ಹೆಸರಿನಲ್ಲಿ ಉತ್ತರ ಕರ್ನಾಟಕದಲ್ಲಿ ಹಿಂದುಗಳ ಹತ್ಯೆಯನ್ನು ಮಾಡಿಸಿದ್ದಾರೆ, ಆ ಹತ್ಯೆ ಮಾಡಿದ ಕೊಲೆಗಡುಗರು ಈಗಲೂ […]
ರಾಜಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆಯೆ ನಳಿನ್ ಕುಮಾರ್ ಕಟೀಲ್?

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಸೋಲಿನ ನೈತಿಕ ಹೊಣೆ ತೆಗೆದುಕೊಂಡಿರುವ ನಳಿನ್ ಕುಮಾರ್ ಕಟೀಲ್ ಸೋಮವಾರದಂದು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿನಿಂದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಭವಿಷ್ಯ ಅನಿಶ್ಚಿತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಮೂರು ಬಾರಿ ಸಂಸದರಾಗಿರುವ ಕಟೀಲ್ 2019ರ ಆಗಸ್ಟ್ನಲ್ಲಿ ಪಕ್ಷದ ಅಧ್ಯಕ್ಷರಾಗಿ ನೇಮಕಗೊಂಡಿದ್ದು, ಈ ಸ್ಥಾನಕ್ಕೆ ಹಲವು ಸ್ಪರ್ಧಿಗಳಿದ್ದಾಗ್ಯೂ, ಬಿಜೆಪಿಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ ಎಲ್ […]
ಪುತ್ತೂರಿಗೆ ಪುತ್ತಿಲ ಅಭಿಯಾನದ ಬಳಿಕ ಮಂಗಳೂರಿಗೆ ಪುತ್ತಿಲ ಅಭಿಯಾನಕ್ಕೆ ಮುನ್ನುಡಿ: ಸಂಸದ ಅಭ್ಯರ್ಥಿಯಾಗಿ ಘೋಷಿಸಲು ಜನತೆಯ ಕರೆ

ಮಂಗಳೂರು: ಪ್ರಖರ ಹಿಂದುತ್ವವಾದಿ ಅರುಣ್ ಕುಮಾರ್ ಪುತ್ತಿಲ ಪುತ್ತೂರಿನಿಂದ ಬಿಜೆಪಿ ಟಿಕೆಟ್ಗೆ ಪ್ರಬಲ ಆಕಾಂಕ್ಷಿಯಾಗಿದ್ದರೂ, ಪಕ್ಷವು ಹಾಲಿ ಶಾಸಕ ಸಂಜೀವ ಮಠಂದೂರು ಅವರಿಗೆ ಟಿಕೆಟ್ ನಿರಾಕರಿಸಿದ್ದಲ್ಲದೆ, ಪುತ್ತೂರಿನಿಂದ ಆಶಾ ತಿಮ್ಮಪ್ಪ ಅವರನ್ನು ಕಣಕ್ಕಿಳಿಸಿತು. ಈ ಹಿಂದೆ ಸಂಘಪರಿವಾರದಲ್ಲಿ ಗುರುತಿಸಿಕೊಂಡಿದ್ದ ಉದ್ಯಮಿ ಅಶೋಕ್ ಕುಮಾರ್ ರೈ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ 66607 ಮತಗಳೊಂದಿಗೆ ಪುತ್ತೂರಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ಜಿದ್ದಾಜಿದ್ದಿನ ಪೈಪೋಟಿ ಇದ್ದಾಗಲೂ ಅರುಣ್ ಕುಮಾರ್ ಪುತ್ತಿಲ ಪಕ್ಷೇತರರಾಗಿ ಸ್ಪರ್ಧಿಸಿ 62458 […]
ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ ಬೊಮ್ಮಾಯಿ: ಇಂದು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ನಿರ್ಧಾರ

ಹೊಸದಿಲ್ಲಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ. “ನಾನು ನನ್ನ ರಾಜೀನಾಮೆಯನ್ನು ನೀಡಿದ್ದೇನೆ ಮತ್ತು ಅದನ್ನು ಅಂಗೀಕರಿಸಲಾಗಿದೆ” ಎಂದು ಬೊಮ್ಮಾಯಿ ಹೇಳಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಗೆದ್ದಿದ್ದು, ಬಿಜೆಪಿ 65 ಮತ್ತು ಜೆಡಿಎಸ್ 19 ಸ್ಥಾನಗಳನ್ನು ಗಳಿಸಿದೆ. ಫಲಿತಾಂಶಗಳನ್ನು ಒಪ್ಪಿಕೊಂಡಿರುವ ಬೊಮ್ಮಾಯಿ, ಬಹುಮತ ಪಡೆಯಲು ಸಾಧ್ಯವಾಗದ ಕೊರತೆಗಳನ್ನು ವಿಶ್ಲೇಷಿಸುವುದಾಗಿ ಹೇಳಿದ್ದಾರೆ. ಪ್ರಧಾನಿ ಮತ್ತು ಬಿಜೆಪಿ ಕಾರ್ಯಕರ್ತರು […]
ಉತ್ತರ ಪ್ರದೇಶ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮುನ್ನಡೆ ಸಾಧಿಸಿದ ಬಿಜೆಪಿ

ಲಕ್ನೋ: ಉತ್ತರ ಪ್ರದೇಶದ ನಗರ ಸ್ಥಳೀಯ ಸಂಸ್ಥೆ (ಯುಎಲ್ಬಿ) ಚುನಾವಣೆಯು ಇಂದು 17 ಮುನ್ಸಿಪಲ್ ಕಾರ್ಪೊರೇಷನ್ಗಳಲ್ಲಿ ಮೇಯರ್ಗಳು ಮತ್ತು ಕಾರ್ಪೊರೇಟರ್ಗಳು ಮತ್ತು ನಗರಪಾಲಿಕೆ ಪರಿಷತ್ಗಳು ಮತ್ತು ನಗರ ಪಂಚಾಯತ್ಗಳ ಅಧ್ಯಕ್ಷರು ಮತ್ತು ಸದಸ್ಯರ ಫಲಿತಾಂಶಗಳ ಘೋಷಣೆಯೊಂದಿಗೆ ಕೊನೆಗೊಳ್ಳಲಿದೆ. ಉತ್ತರ ಪ್ರದೇಶದ ಮುನ್ಸಿಪಲ್ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯದತ್ತ ಮುನ್ನುಗ್ಗುತ್ತಿದ್ದು 17 ಕಾರ್ಪೊರೇಷನ್ ಸ್ಥಾನಗಳಲ್ಲಿ 16 ರಲ್ಲಿ ಮುನ್ನಡೆ ಸಾಧಿಸಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿಯ ಅಭಿವೃದ್ದಿ ಕಾರ್ಯಗಳು ಮತ್ತು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಜನರು ಒಪ್ಪಿಗೆಯ […]