ಇಸ್ರೇಲ್ ನಲ್ಲಿರುವ ಕುಟುಂಬ ಸದಸ್ಯರ ಮಾಹಿತಿಗಾಗಿ ಸಹಾಯವಾಣಿ ಸಂಪರ್ಕಿಸಿ: ಯಶ್ ಪಾಲ್ ಸುವರ್ಣ

ಉಡುಪಿ: ಯುದ್ಧಪೀಡಿತ ಇಸ್ರೇಲ್‌ನಲ್ಲಿ ಸಿಲುಕಿರುವ ಉಡುಪಿ ಜಿಲ್ಲೆಯವರ ರಕ್ಷಣೆಗಾಗಿ ಸಹಾಯವಾಣಿಯನ್ನು ತೆರೆಯಲಾಗಿದ್ದು, ಇಸ್ರೇಲ್‌ನಲ್ಲಿರುವ ಕುಟುಂಬ ಸದಸ್ಯರು ಸಂಪರ್ಕಕ್ಕೆ ಸಿಗದಿದ್ದಲ್ಲಿ ಅಥವಾ ಯುದ್ಧದಿಂದಾಗಿ ಸಂಕಷ್ಟದಲ್ಲಿರುವ ಕುಟುಂಬಿಕರಿಗೆ ತಕ್ಷಣದ ನೆರವಿನ ಅಗತ್ಯವಿದ್ದಲ್ಲಿ ಕೂಡಲೇ ಈ ಕೆಳಗಿನ ಮೊಬೈಲ್ ಸಂಖ್ಯೆಗೆ ಕರೆಮಾಡಿ ಅಥವಾ ವಾಟ್ಸ್ಯಾಪ್ ಸಂಖ್ಯೆಗೆ ಸಂದೇಶ ಕಳುಹಿಸಿ ಅಗತ್ಯ ನೆರವು ಪಡೆಯಬಹುದು ಎಂದು ಯಶಪಾಲ್ ಸುವರ್ಣ ತಿಳಿಸಿದ್ದಾರೆ. ಮೊಬೈಲ್ – +919964023344, +919110882491 ವಾಟ್ಸ್ಯಾಪ್ – +919740217378 ಇಮೈಲ್ ಐಡಿ: [email protected]  

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದ ಕರ್ನಾಟಕ ಹೈಕೋರ್ಟ್

ಬೆಂಗಳೂರು: ಕಳೆದ ವರ್ಷ ಭಾರತೀಯ ಜನತಾ ಪಕ್ಷದ(BJP) ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಮೂವರ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ. ನ್ಯಾಯಮೂರ್ತಿಗಳಾದ ಎಚ್‌ಬಿ ಪ್ರಭಾಕರ ಶಾಸ್ತ್ರಿ ಮತ್ತು ಅನಿಲ್ ಬಿ ಕತ್ತಿ ಅವರ ಪೀಠವು ಆರೋಪಿಗಳು ಅಪರಾಧದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವುದನ್ನು ತೋರಿಸಲು ಸಾಕಷ್ಟು ದೋಷಾರೋಪಣೆಯ ಸಾಕ್ಷ್ಯವನ್ನು ಕಂಡುಹಿಡಿದಿದೆ. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸದಸ್ಯರಾಗಿರುವ ಮೂವರು ಆರೋಪಿಗಳಾದ ಇಸ್ಮಾಯಿಲ್ ಶಫಿ ಕೆ, ಕೆ ಮಹಮ್ಮದ್ ಇಕ್ಬಾಲ್ ಮತ್ತು ಶಹೀದ್ ಎಂ […]

ಕಾಪು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಉಚ್ಛಾಟನೆ

ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಉದ್ಯಾವರ ಗ್ರಾಮ ಪಂಚಾಯತ್‌ನ ಅಧ್ಯಕ್ಷರು ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದುಕೊಂಡು ಪಕ್ಷದ ನಿಲುವನ್ನು ವಿರೋಧಿಸಿ ಬಿಜೆಪಿಯ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅವರ ಸೋಲಿಗೆ ಕಾರಣರಾಗಿರುವ ಮಾಲತಿ ಮತ್ತು ಅವರಿಗೆ ಬೆಂಬಲಿಸಿರುವ ಗ್ರಾಮ ಪಂಚಾಯತ್ ಸದಸ್ಯರಾದ ಗಿರೀಶ್ ಸುವರ್ಣ ಹಾಗೂ ಫ್ರೀಡಾ ಡಿ’ಸೋಜಾ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಾಗಿ ಕಾಪು ಮಂಡಲ ಅಧ್ಯಕ್ಷರ ಶಿಫಾರಸ್ಸಿನ ಮೇರೆಗೆ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್‌ ಸೂಚನೆಯಂತೆ 6 ವರ್ಷಗಳ ಕಾಲ […]

ಪ್ರಧಾನಿ ಮೋದಿ ಜನ್ಮದಿನ ನಿಮಿತ್ತ ಕಾಪು ಬಿಜೆಪಿ ವತಿಯಿಂದ ರಕ್ತದಾನ ಶಿಬಿರ

ಕಾಪು: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ‌ ಭಾನುವಾರದಂದು ಕಾಪು ಬಿಜೆಪಿ ವತಿಯಿಂದ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್ ನೆರವೇರಿಸಿದರು.‌ ಬಳಿಕ ಮಾತನಾಡಿದ ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್, ಮೋದಿ ಅವರ ಜನ್ಮ ದಿನದಿಂದ ಗಾಂಧಿ ಜಯಂತಿ ತನಕ ನಡೆಯುವ ಸೇವಾ ಪಾಕ್ಷಿಕ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಈ ಎಲ್ಲ ಸೇವಾ ಕಾರ್ಯಗಳ ಪುಣ್ಯದ […]

ಸೌಜನ್ಯ ಪ್ರಕರಣ ಮರು ತನಿಖೆಗೆ ಒತ್ತಾಯಿಸಿ ದ.ಕ-ಉಡುಪಿ ಜಿಲ್ಲಾ ಬಿಜೆಪಿ ಶಾಸಕರಿಂದ ಮುಖ್ಯಮಂತ್ರಿಗಳಿಗೆ ಮನವಿ

ಮಂಗಳೂರು/ಉಡುಪಿ: ಸೌಜನ್ಯ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗವು ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಈ ವಿಷಯವನ್ನು ಸೌಜನ್ಯ ಪೋಷಕರಿಗೆ ನಾನು ತಿಳಿಸಿದ್ದೇನೆ. ಈಗಾಗಲೇ ಕಾನೂನು ಸಲಹೆಯನ್ನು ನಾನು ಪಡೆದಿರುವುದರಿಂದ ಸೌಜನ್ಯಳ ಪೋಷಕರು ಮೇಲ್ಮನವಿ ಸಲ್ಲಿಸಬಹುದು ಅಥವಾ ಸಿಬಿಐ ಮೇಲ್ಮನವಿ ಸಲ್ಲಿಸಲು ಅವಕಾಶವಿರುತ್ತದೆ. ನಿಯೋಗವು […]