ತನಿಖಾ ಸಂಸ್ಥೆಗಳಿಂದ ಬಂಧನದ ಅಧಿಕಾರ ದುರುಪಯೋಗದ ವಿರುದ್ಧ ಮಾರ್ಗಸೂಚಿ: ವಿರೋಧ ಪಕ್ಷಗಳ ಮನವಿ ಪರಿಗಣಿಸಲು ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ಪ್ರತಿಪಕ್ಷ ನಾಯಕರ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ)ಯಂತಹ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ‘ನಿರಂಕುಶವಾಗಿ ಬಳಸಲಾಗುತ್ತಿದೆ’ ಎನ್ನುವ ಆರೋಪ ಕೇಳಿಬರುತ್ತಿದ್ದು, ಸಿಬಿಐ ಮತ್ತು ಇಡಿ ಬಂಧನ ಅಧಿಕಾರದ ದುರುಪಯೋಗದ ವಿರುದ್ಧ ಮಾರ್ಗಸೂಚಿಗಳನ್ನು ಕೋರಿ 14 ವಿರೋಧ ಪಕ್ಷದ ರಾಜಕೀಯ ಪಕ್ಷಗಳು ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.  ಬಂಧನ, ವಿಚಾರಣೆ ಮತ್ತು ಜಾಮೀನನ್ನು ನಿಯಂತ್ರಿಸುವ ಹೊಸ ಮಾರ್ಗದರ್ಶಿ ಸೂತ್ರಗಳನ್ನು ಬಯಸಿ ಕಾಂಗ್ರೆಸ್ ನೇತೃತ್ವದಲ್ಲಿ 14 ವಿರೋಧ ಪಕ್ಷಗಳು ಸಲ್ಲಿಸಿದ್ದ […]

ಕಿಚ್ಚ ಸುದೀಪ್ ರಾಜಕೀಯ ರಂಗ ಪ್ರವೇಶವಿಲ್ಲ; ಪ್ರಚಾರ ಮಾತ್ರ: ಬೊಮ್ಮಾಯಿ-ಸುದೀಪ್ ಜಂಟಿ ಸುದ್ದಿಗೋಷ್ಠಿ

ಬೆಂಗಳೂರು: ಬಹುಭಾಷಾ ನಟ ಕಿಚ್ಚ ಸುದೀಪ್ ಬಿಜೆಪಿ ಸೇರುತ್ತಾರೆ ಎನ್ನುವ ಊಹಾಪೋಹಗಳಿಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಸ್ವತಃ ಸುದೀಪ್ ಅವರೇ ತೆರೆ ಎಳೆದಿದ್ದಾರೆ. ಬುಧವಾರದಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿಯವರನ್ನು ಮಾಮಾ ಅಂತ ಕರೆಯುತ್ತೇನೆ. ಚಿತ್ರರಂಗಕ್ಕೆ ಬಂದಾಗ ನನಗೆ ಗಾಡ್ ಫಾದರ್ ಇರಲಿಲ್ಲ. ಆಗ ನನ್ನ ಜೊತೆಯಲ್ಲಿ ಕೆಲವೇ ಕೆಲವರು ನಿಂತಿದ್ದರು. ಅಂಥಹವರಲ್ಲಿ ನನ್ನ ಮಾಮ ಸಿಎಂ ಬೊಮ್ಮಾಯಿ ಒಬ್ಬರು. ಅವರು ಕೂಡಾ ಆಗ್ಅ ತಾನೇ ರಾಜಕೀಯಕ್ಕೆ ಬಂದಿದರು. ನಾನು ಅವರ […]

ಚುನಾವಣಾ ನಿವೃತ್ತಿ ಘೋಷಿಸಿದ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ

ಕುಂದಾಪುರ: ಕುಂದಾಪುರ ಮಾತ್ರವಲ್ಲ, ಕರ್ನಾಟಕದ ರಾಜಕೀಯ ಕ್ಷೇತ್ರದಲ್ಲಿ ಅತ್ಯಂತ ಸಹೃದಯಿ, ನಿಷ್ಟಾವಂತ ಮತ್ತು ಅತ್ಯಧಿಕ ಜನ ಮನ್ನಣೆಗಳಿಸಿ ಕುಂದಾಪುರದ ವಾಜಪೇಯಿ ಎಂದೇ ಕರೆಯಲ್ಪಡುವ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಚುನಾವಣಾ ನಿವೃತ್ತಿ ಘೋಷಿಸಿದ್ದಾರೆ. ಸತತ ಐದು ಬಾರಿ ಚುನಾವಣೆಯಲ್ಲಿ ಗೆದ್ದಿರುವ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಪಕ್ಷದ ಹೆಸರಿನ ಹಂಗಿಲ್ಲದೆ ಯೂ ತಮ್ಮ ಸ್ವಂತ ಬಲದಿಂದಲೇ ಗೆಲ್ಲುವ ಸಾಮರ್ಥ್ಯ ಉಳ್ಳ ಅಭ್ಯರ್ಥಿ. ಕುಂದಾಪುರದಲ್ಲಿ ಹಾಲಾಡಿಯವರಿಗೆ ಅಪಾರ ಜನ ಬೆಂಬಲವಿದೆ. ಮತದಾರರು ಇದನ್ನು ಯಾವ ರೀತಿ ತೆಗೆದುಕೊಳ್ಳಲಿದ್ದಾರೆ ಎನ್ನುವುದು ಮುಂದಿನ ದಿನಗಳಲ್ಲಿ […]

ಯುಪಿಎ ಆಡಳಿತದಲ್ಲಿ ಪ್ರಧಾನಿ ಮೋದಿಯವರನ್ನು ಬಂಧಿಸುವಂತೆ ಸಿಬಿಐ ಒತ್ತಡ ಹೇರಿದ್ದರೂ ಪಕ್ಷ ಗದ್ದಲ ಎಬ್ಬಿಸಿರಲಿಲ್ಲ: ಅಮಿತ್ ಶಾ

ಹೊಸದಿಲ್ಲಿ: ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುಜರಾತ್‌ನಲ್ಲಿ ನಡೆದ ತಥಾಕಥಿತ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ “ಸಿಲುಕಿಸುವಂತೆ” ತನಿಖಾ ಸಂಸ್ಥೆ ವಿಚಾರಣೆಯ ಸಂದರ್ಭದಲ್ಲಿ ಸಿಬಿಐ ತನ್ನ ಮೇಲೆ “ಒತ್ತಡ” ಹೇರಿತ್ತು. ಆದಾಗ್ಯೂ, ನಾವ್ಯಾರೂ ಗದ್ದಲ ಎಬ್ಬಿಸಲಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ. ‘ನ್ಯೂಸ್ 18 ರೈಸಿಂಗ್ ಇಂಡಿಯಾ’ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಸರ್ಕಾರವು ಪ್ರತಿಪಕ್ಷಗಳನ್ನು ಗುರಿಯಾಗಿಸಲು ಕೇಂದ್ರೀಯ ಸಂಸ್ಥೆಗಳನ್ನು “ದುರುಪಯೋಗಪಡಿಸಿಕೊಳ್ಳುತ್ತಿದೆ” ಎಂಬ ಪ್ರತಿಪಕ್ಷಗಳ ಆರೋಪದ ಪ್ರಶ್ನೆಗೆ […]

ಚನ್ನಗಿರಿ ಬಿಜೆಪಿ ಶಾಸಕನ ಪುತ್ರನ ಬಳಿ 7 ಕೋಟಿ 62 ಲಕ್ಷ ರೂ.ಪತ್ತೆ ಮಾಡಿದ ಲೋಕಾಯುಕ್ತ; 14 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು: ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ, ಕೆಎಸ್​ಡಿಎಲ್​ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಟೆಂಡರ್​ ಒಂದಕ್ಕೆ ಸಂಬಂಧಿಸಿದಂತೆ 80 ಲಕ್ಷ ಕಮಿಷನ್​​ ಕೇಳಿದ್ದು ಈ ಸಂಬಂಧ ಮುಂಗಡವಾಗಿ 40 ಲಕ್ಷ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪ್ರಶಾಂತ್ ನನ್ನು ಬಂಧಿಸಿದ್ದರು. ಬಳಿಕ ಪ್ರಶಾಂತ್‌ ಕಚೇರಿ ಮತ್ತು ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಾಡಿದ್ದರು. ಈ ವೇಳೆ ಆತನ ಮನೆ ಹಾಗೂ ಕಚೇರಿಗಳಿಂದ 7 ಕೋಟಿ 62 ಲಕ್ಷ ರೂ. ಹಣ ಪತ್ತೆಯಾಗಿದೆ. ಲಂಚ ಸ್ವೀರಿಸುತ್ತಿದ್ದ […]