ಈಶಾನ್ಯ ರಾಜ್ಯಗಳಲ್ಲಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಗೆ ಜನಮನ್ನಣೆ: ನಯನಾ ಗಣೇಶ್

ಉಡುಪಿ: ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿಯ ಗೆಲುವು ಮುಂದಿನ ಕರ್ನಾಟಕ ಚುನಾವಣೆಗೆ ದಿಕ್ಸೂಚಿಯಾಗಲಿದೆಯೆಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ತಿಳಿಸಿದ್ದಾರೆ. ಅನೇಕ ವರ್ಷಗಳ ಕಾಲ ಪಕ್ಷ ಸಂಘಟನೆ ಕ್ಲಿಷ್ಟಕರವಾಗಿದ್ದ ಈಶಾನ್ಯ ರಾಜ್ಯಗಳಾದ ತ್ರಿಪುರ ಮತ್ತು ನ್ಯಾಗಲ್ಯಾಂಡ್ ಲ್ಲಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಗೆ ಜನ ಮನ್ನಣೆ ನೀಡಿದ್ದಾರೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರದ ಅಭಿವೃದ್ಧಿ ಕೆಲಸಗಳನ್ನು ಜನ ಮೆಚ್ಚಿದ್ದು,ಈ ಫಲಿತಾಂಶ ನಮ್ಮೆಲ್ಲ ಕಾರ್ಯಕರ್ತರಿಗೆ ಸ್ಫೂರ್ತಿಯಾಗಿದೆ. ಕಾಂಗ್ರೆಸ್ ಪಕ್ಷ ಈಶಾನ್ಯ ರಾಜ್ಯಗಳಲ್ಲಿ ಅಸ್ತಿತ್ವವನ್ನು […]
ತ್ರಿಪುರಾ ನಾಗಾಲ್ಯಾಂಡ್ ನಲ್ಲಿ ಸರಕಾರ ರಚಿಸುವತ್ತ ಬಿಜೆಪಿ; ಮೇಘಾಲಯ ಸಮ್ಮಿಶ್ರ ಸರ್ಕಾರದತ್ತ ಚುನಾವಣಾ ಫಲಿತಾಂಶ

ನವದೆಹಲಿ: ಈಶಾನ್ಯ ರಾಜ್ಯಗಳ ಚುನಾವಣಾ ಫಲಿತಾಂಶಗಳ ಇತ್ತೀಚಿನ ಟ್ರೆಂಡ್ಗಳ ಪ್ರಕಾರ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ತ್ರಿಪುರಾ ಮತ್ತು ನಾಗಾಲ್ಯಾಂಡ್ ಎರಡರಲ್ಲೂ ಅಧಿಕಾರವನ್ನು ಉಳಿಸಿಕೊಳ್ಳಲು ಸಜ್ಜಾಗಿವೆ. ಏತನ್ಮಧ್ಯೆ, ಕಾನ್ರಾಡ್ ಸಂಗ್ಮಾ ನೇತೃತ್ವದ ಎನ್ಪಿಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಸ್ಪಷ್ಟ ಬಹುಮತದ ಕೊರತೆಯಿಂದಾಗಿ ಮೇಘಾಲಯವು ಸಮ್ಮಿಶ್ರ ಸರಕಾರ ರಚಿಸುವತ್ತ ಸಾಗುತ್ತಿದೆ. ಚುನಾವಣಾ ಟ್ರೆಂಡ್ಗಳು ಇದೇ ರೀತಿ ಮುಂದುವರಿದಲ್ಲಿ ಬಿಜೆಪಿಯು ಈಶಾನ್ಯ ಭಾರತದಲ್ಲಿ ತನ್ನ ಬಲವಾದ ಹಿಡಿತವನ್ನು ಉಳಿಸಿಕೊಳ್ಳುತ್ತದೆ ಮತ್ತು 8 ರಲ್ಲಿ 7 ರಾಜ್ಯಗಳಲ್ಲಿ ಸರ್ಕಾರವನ್ನು ಹೊಂದಲಿದೆ. […]
ಮಾ.13 ರಿಂದ 15ರ ವರೆಗೆ ಜಿಲ್ಲೆಯಲ್ಲಿ ಬಿಜೆಪಿ ‘ವಿಜಯ ಸಂಕಲ್ಪ ಯಾತ್ರೆ’

ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರಿಂದ ಚಾಲನೆಗೊಂಡು ರಾಜ್ಯದಾದ್ಯಂತ ನಡೆಯಲಿರುವ ‘ವಿಜಯ ಸಂಕಲ್ಪ ಯಾತ್ರೆ’ ಮಾ.13 ರಿಂದ 15ರ ವರೆಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಇವರ ನೇತೃತ್ವದಲ್ಲಿ ಉಡುಪಿ ಜಿಲ್ಲೆಯಾದ್ಯಂತ ನೆರವೇರಲಿದೆ ಎಂದು ಬಿಜೆಪಿ ಜಿಲ್ಲಾ ಆರ್ಥಿಕ ಪ್ರಕೋಷ್ಠದ ಸಂಚಾಲಕ ದಿವಾಕರ ಶೆಟ್ಟಿ ಕೆ. ಹೇಳಿದರು. ಅವರು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಮಾರ್ಚ್ 13, ಮಧ್ಯಾಹ್ನ 3.30ಕ್ಕೆ […]
ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಗಳಿಂದ ಜಗನ್ನಾಥ ಭವನ ಭೇಟಿ

ಬೆಂಗಳೂರು: ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನಕ್ಕೆ ಇಂದು ಕರ್ನಾಟಕದ ಚುನಾವಣಾ ಉಸ್ತುವಾರಿಗಳಾದ ಧರ್ಮೇಂದ್ರ ಪ್ರಧಾನ್, ಸಹ ಉಸ್ತುವಾರಿಗಳಾದ ಮನ್ ಸುಖ್ ಮಾಂಡವೀಯ ಹಾಗೂ ಕೆ. ಅಣ್ಣಾಮಲೈ ಭೇಟಿ ನೀಡಿ, ಭಾರತ ಮಾತೆಯ ಭಾವಚಿತ್ರಕ್ಕೆ ಹಾಗೂ ಜಗನ್ನಾಥ್ ರಾವ್ ಜೋಷಿ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ, ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಜಿ.ವಿ ಮುಂತಾದವರು ಉಪಸ್ಥಿತರಿದ್ದರು.
ಚಿತ್ರನಟ ಅನಂತ್ ನಾಗ್ ಇಂದು ಬಿಜೆಪಿಗೆ ಸೇರ್ಪಡೆ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಖ್ಯಾತ ನಟ ಅನಂತ್ ನಾಗ್ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಳ್ಳುತ್ತಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸಂಜೆ 4.30ಕ್ಕೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬಿಜೆಪಿಗೆ ಸೇರುತ್ತಿದ್ದಾರೆ ಎಂದು ವರದಿಯಾಗಿದೆ. 1980 ರಲ್ಲೇ ರಾಜಕೀಯ ರಂಗಕ್ಕೆ ಪಾದಾರ್ಪಣೆ ಮಾಡಿರುವ ಅನಂತ್ ನಾಗ್ 1983ರಲ್ಲಿ ಜನತಾ ಪಕ್ಷದ ಪ್ರಚಾರಕರಾಗಿದ್ದರು. 1985 ಮತ್ತು 1989 ರಲ್ಲಿಯೂ ಪಕ್ಷದ ಪ್ರಚಾರಕರಾಗಿ ಗುರುತಿಸಿಕೊಂಡ ಇವರು, 1983ರಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಶಿವರಾಮ ಕಾರಂತರ […]